ವಿಜಯಪುರ: ಮಳೆ ಹಾಗೂ ನೆರೆ ಹಾವಳಿಗೆ ಸಂಬಂಧಿಸಿದಂತೆ ಸಿಎಂ ಯಡಿಯೂರಪ್ಪ ಮಂಗಳವಾರ ಮೂರು ಜಿಲ್ಲೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಇಲ್ಲಿನ ಆಲನಲಮಟ್ಟಿ ಜಲಾಶಯದ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯಲ್ಲಿ ಗದಗ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆ ಪರಿಸ್ಥಿತಿ ಬಗ್ಗೆ ಪರಿಶೀಲಿಸಿದರು.
ಇದನ್ನೂ ಓದಿ: VIDEO: ಚೇರ್ನಿಂದ ಕೆಳಗೆ ಬಿದ್ದು ಟ್ರೋಲ್ ಆದ ಪಾಕ್ ಕ್ರಿಕೆಟಿಗ..!
ಡಿಸಿಎಂ ಗೋವಿಂದ ಕಾರಜೋಳ, ಸಚಿವ ಆರ್.ಅಶೋಕ, ಬಸವರಾಜ ಬೊಮ್ಮಾಯಿ, ಶಾಸಕರಾದ ಎ.ಎಸ್. ಪಾಟೀಲ ನಡಹಳ್ಳಿ, ಎಸ್.ಆರ್. ಪಾಟೀಲ, ಮುರುಗೇಶ ನಿರಾಣಿ ಸೇರಿದಂತೆ ಮೂರು ಜಿಲ್ಲೆಗಳ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಭಾಗವಹಿಸಿದ್ದರು.