ದಾವಣಗೆರೆ: ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮದಲ್ಲಿ ಇಂದು ಕಂದಾಯ ಸಚಿವರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಕಂದಾಯ ಸಚಿವ ಆರ್.ಅಶೋಕ್ ಅವರು ತೆರೆದ ಎತ್ತಿನ ಗಾಡಿಯಲ್ಲಿ ಎಂಟ್ರಿ ನೀಡಿದರು.
ಗ್ರಾಮ ವಾಸ್ತವ್ಯಕ್ಕೆ ಚಾಲನೆ ನೀಡಲು ಹಮ್ಮಿಕೊಂಡಿದ್ದ ಕಾರ್ಯಕ್ರಮದ ವೇದಿಕೆಗೆ ಮುಖ್ಯಮಂತ್ರಿಗಳು, ಕಂದಾಯ ಸಚಿವರು ಮತ್ತಿತರ ನಾಯಕರು ಎತ್ತಿನ ಗಾಡಿಯಲ್ಲಿ ಆಗಮಿಸಿದರು. ಎತ್ತಿನ ಗಾಡಿಯ ಸಾರಥ್ಯವನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ವಹಿಸಿಕೊಂಡಿದ್ದರು.
ಸಿಎಂ ಬೊಮ್ಮಾಯಿ ಅವರ ಭೇಟಿ ಮತ್ತು ಪ್ರವೇಶದ ವಿಧಾನದಿಂದ ಭಾರೀ ಹುರುಪುಗೊಂಡ ಜನರು ನೂಕುನುಗ್ಗಲು ಆರಂಭಿಸಿದರು. ಜೊತೆಗೆ, ಸಿಎಂ ಸೇರಿದಂತೆ ಬಹುತೇಕ ಜನರು ಮಾಸ್ಕ್ ಮತ್ತು ಸಾಮಾಜಿಕ ಅಂತರವಿಲ್ಲದೆ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದು ಕಂಡುಬಂತು.
ಭೂಕಂಪ: ಕಾರಣ, ಪರಿಣಾಮ, ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ತಜ್ಞರೊಂದಿಗೆ ಸಂವಾದ – ವಿಜಯವಾಣಿ ಕ್ಲಬ್ಹೌಸ್ನಲ್ಲಿ
ಐಪಿಎಲ್ 2021 ಗೆದ್ದ ಸಿಎಸ್ಕೆ, ಇತರ ತಂಡಗಳಿಗೆ ಸಿಕ್ಕ ಬಹುಮಾನದ ಹಣ ಎಷ್ಟು ಗೊತ್ತಾ?