More

    ವಿಧಾನಸಭೆ ಗೆಲುವಿನ ಗುಂಗಿನಲ್ಲಿ ಸಿಂ: ಯಡಿಯೂರಪ್ಪ

    ಶಿವಮೊಗ್ಗ: ಸಿಎಂ ಸಿದ್ದರಾಮಯ್ಯ ಅವರು ವಿಧಾನಸಭೆ ಚುನಾವಣೆಯ ಗುಂಗಿನಿಂದ ಇನ್ನೂ ಹೊರಗೆ ಬಂದಿಲ್ಲ. ಇದು ಲೋಕಸಭೆ ಚುನಾವಣೆ ಎಂಬುದನ್ನು ಅವರು ಮರೆತಂತೆ ಕಾಣುತ್ತಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ವಿಶ್ವಾಸರ್ಹತೆ ನಾಯಕರೇ ಇಲ್ಲದಂತಾಗಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಣಕಿಸಿದರು.

    ಸಿಎಂ ಸೇರಿ ರಾಜ್ಯದ ಸಚಿವರು, ನಾಯಕರು ಕೇಂದ್ರದಿಂದ ಅನುದಾನ ಬಿಡುಗಡೆ ಆಗುತ್ತಿಲ್ಲ ಎಂದು ಜನರ ದಾರಿ ತಪ್ಪಿಸುವ ಮೂಲಕ ವಿವಾದ ಸೃಷ್ಟಿಸುತ್ತಿದ್ದಾರೆ. ಬಿಜೆಪಿ ಪ್ರಧಾನಿ ನರೇಂದ್ರ ಮೋದಿ ಅವರ 10 ವರ್ಷದ ಸಾಧನೆ ಆಧಾರದ ಮೇಲೆ ಚುನಾವಣೆ ಎದುರಿಸಿದರೆ, ಕಾಂಗ್ರೆಸ್ ಸುಳ್ಳಿನ ಆಧಾರದ ಮೇಲೆ ಚುನಾವಣೆ ನಡೆಸುತ್ತಿದೆ. ಕಾಂಗ್ರೆಸ್ ವಿಷಯಾಧಾರಿತ ಚುನಾವಣೆಗೆ ಒತ್ತು ನೀಡುತ್ತಿದೆ ಎಂದು ದೂರಿದರು.
    ಭಾರತ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಿದೆ. ಅದೇ ನಮ್ಮ ಸಂಕಲ್ಪ. ದೇಶದ ರಕ್ಷಣೆ ದೃಷ್ಟಿಯಿಂದ ಬಿಜೆಪಿ ಸಂಕಲ್ಪ ಬದ್ಧವಾಗಿದೆ. ಪ್ರತಿಪಕ್ಷಗಳು ಕೇಂದ್ರ ಸರ್ಕಾರ ಕೊಟ್ಟ ಮಾತಿನಂತೆ ಎರಡು ಕೋಟಿ ಉದ್ಯೋಗ ನೀಡಿಲ್ಲ ಎಂದು ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಅದರ ಬದಲು 10 ವರ್ಷದಲ್ಲಿ ಸೃಷ್ಟಿ ಆಗಿರುವ ಉದ್ಯೋಗದ ಬಗ್ಗೆ ಅವರು ಅರಿತುಕೊಳ್ಳಬೇಕಿದೆ ಎಂದು ಸಲಹೆ ನೀಡಿದ ಅವರು, 2022ರಲ್ಲಿ ಪಿಎಫ್ ಖಾತೆ ಪ್ರಮಾಣ 22 ಕೋಟಿ ದಾಟಿದ್ದು 2018ಕ್ಕೆ ಹೋಲಿಸಿದರೆ 7 ಕೋಟಿ ಹೊಸ ಉದ್ಯೋಗ ಸೃಷ್ಟಿಯಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts