ಬೆಂಗಳೂರು: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಕಾಂಗ್ರೆಸ್ನಲ್ಲಿ ಕೊನೆಗೂ ತೀರ್ಮಾನವಾದ ಬೆನ್ನಿಗೆ ರಾಜ್ಯ ಬಿಜೆಪಿಯಲ್ಲೂ ಇದೀಗ ಭಾರಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ವಿಧಾನಸಭೆಯ ವಿಪಕ್ಷ ನಾಯಕನ ಆಯ್ಕೆ ಹಿನ್ನೆಲೆಯಲ್ಲಿ ರಾಜಕಾರಣ ಚುರುಕುಗೊಂಡಿದೆ.
ಈ ಹಿಂದೆ ವಿಧಾನಸಭೆಯ ವಿಪಕ್ಷ ನಾಯಕ ಆಗಿದ್ದ ಸಿದ್ದರಾಮಯ್ಯ ಇದೀಗ ನೂತನ ಮುಖ್ಯಮಂತ್ರಿ ಆಗಿ ಆಯ್ಕೆಗೊಂಡಿದ್ದರಿಂದ, ಇನ್ನೊಮ್ಮೆ ಸಿಎಂ ಆಗುವ ಅವಕಾಶ ಸಿಕ್ಕಿದೆ. ಮತ್ತೊಂದೆಡೆ ಪ್ರಬಲ ಆಕಾಂಕ್ಷಿಯಾಗಿದ್ದ ಡಿ.ಕೆ.ಶಿವಕುಮಾರ್ಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ.
ಇದನ್ನೂ ಓದಿ: ಸಿಎಂ ಸ್ಥಾನಕ್ಕಾಗಿ ‘ಬಂಡೆ’ದ್ದ ಡಿ.ಕೆ.ಶಿವಕುಮಾರ್ ಮನವೊಲಿಸಿದ್ಯಾರು?
ಕಾಂಗ್ರೆಸ್ನಲ್ಲಿ ಸಿಎಂ ಆಯ್ಕೆ ಗೊಂದಲ ಪರಿಹಾರ ಆಗುತ್ತಿದ್ದಂತೆ ಇತ್ತ ಬಿಜೆಪಿಯಲ್ಲಿ ವಿಧಾನಸಭೆಯ ವಿಪಕ್ಷ ನಾಯಕನ ಆಯ್ಕೆಗೆ ಮುಂದಾಗಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಹಂಗಾಮಿ ಸಿಎಂ ಬೊಮ್ಮಾಯಿ, ವಿಪಕ್ಷ ನಾಯಕನ ಆಯ್ಕೆ ಕುರಿತು ಶೀಘ್ರವೇ ಶಾಸಕಾಂಗ ಪಕ್ಷದ ಸಭೆ ಕರೆದು ಪ್ರಕ್ರಿಯೆ ನಡೆಸುತ್ತೇವೆ ಎಂದಿದ್ದಾರೆ.
ಹೆಲ್ಮೆಟ್ ಧರಿಸದ ಮಹಿಳಾ ಪಿಎಸ್ಐ; ಟ್ವೀಟ್ ವೈರಲ್ ಆಗುತ್ತಿದ್ದಂತೆ ಪ್ರಕರಣ ದಾಖಲು, ದಂಡ ವಿಧಿಸಿದ ಪೊಲೀಸರು