More

    ಪಕ್ಷ ಉಳಿಸುವ ಯತ್ನದಲ್ಲಿ ಸಿದ್ಧಾಂತ ಬಲಿ ಕೊಡುತ್ತಿರುವ ಜೆಡಿಎಸ್: ಸಿದ್ದರಾಮಯ್ಯ ಟೀಕೆ

    ಬೆಂಗಳೂರು: ಪಕ್ಷವನ್ನು ಉಳಿಸುವ ನಿಟ್ಟಿನಲ್ಲಿ ಜೆಡಿಎಸ್ ತನ್ನ ಸಿದ್ಧಾಂತವನ್ನು ಬಲಿ ಕೊಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

    ಇದನ್ನೂ ಓದಿ: ಟೋಲ್ ಪಾವತಿಸಿ ಎಂದು ಹೇಳಿದ್ದೇ ತಪ್ಪಾಯ್ತ?; ಸಿಬ್ಬಂದಿ ಕೂದಲನ್ನು ಎಳೆದಾಡಿದ ಮಹಿಳೆ; ವಿಡಿಯೋ ವೈರಲ್​​!

    ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರು “ಸಿದ್ದಾಂತವಿಲ್ಲದ ಪಕ್ಷಗಳು ಒಂದೆಡೆ ಸೇರುತ್ತಿರುವುದರಿಂದ, ನಾವು ಎನ್ಡಿಎ ಕಡೆ ಹೋದರೆ ತಪ್ಪಲ್ಲ, ಪಕ್ಷ ಉಳಿಸಿಕೊಳ್ಳುವುದು ಮುಖ್ಯ” ಎಂದು ಹೇಳುತ್ತಿರುವ ಬಗ್ಗೆ ಉತ್ತರ ನೀಡಿರುವ ಸಿಎಂ, “ಜೆಡಿಎಸ್​​ಗೆ ಸಿದ್ಧಾಂತವೇ ಇಲ್ಲ. ಬಿಜೆಪಿಗೆ ಬೆಂಬಲ ಸೂಚಿಸಿದ ನಂತರ ಅವರ ಜಾತ್ಯಾತೀತತೆ ಏನಾಯಿತು? ಪಕ್ಷವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅವರು ಸಿದ್ಧಾಂತವನ್ನು ಬಲಿ ಕೊಡುತ್ತಿದ್ದಾರೆ ಅಂತಲೇ ಅರ್ಥ” ಎಂದು ಹೇಳಿದರು.

    ಇದನ್ನೂ ಓದಿ: Karnataka Assembly Session 2023 | BY Vijayendra Slams Congress | ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

    ಮೈತ್ರಿ ಸರ್ಕಾರ ರಚನೆ ಸಂದರ್ಭದಲ್ಲಿಯೂ 21 ಪಕ್ಷಗಳ ಮುಖಂಡರು ಬಂದರೂ ಪ್ರಯೋಜನವಾಗಲಿಲ್ಲ ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಅವರನ್ನೆಲ್ಲಾ ಕರೆದಿದ್ದು ಕುಮಾರಸ್ವಾಮಿಯವರೇ, ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಅವರು ಆ ಸಂಬಂಧವನ್ನು ಮುಂದುವರೆಸಲಿಲ್ಲ ಎಂದು ಹೇಳಿದರು.

    ಚರ್ಮ ಸುಕ್ಕುಗಟ್ಟಿದ ಹಾಗೆ ಕಾಣುತ್ತಿದೆಯಾ?; ಅದಕ್ಕೆ ಪರಿಹಾರ ಮನೆಯಲ್ಲೇ ಇದೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts