ಹಾರ-ತುರಾಯಿ ಬದಲು ಪುಸ್ತಕ ಆಯ್ತು; ಇದೀಗ ಮತ್ತೊಂದು ಆದೇಶ ಹೊರಡಿಸಲು ಸಜ್ಜಾಗಿದ್ದಾರೆ ಸಿಎಂ ಬೊಮ್ಮಾಯಿ..

ಬೆಂಗಳೂರು: ಮೊನ್ನೆಮೊನ್ನೆಯಷ್ಟೇ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ-ತುರಾಯಿ, ಬೊಕ್ಕೆ ನೀಡುವುದನ್ನು ನಿಷೇಧಿಸಿ ಅದರ ಬದಲು ಪುಸ್ತಕ ನೀಡುವಂತೆ ಸರ್ಕಾರದಿಂದ ಆದೇಶ ಹೊರಡಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೀಗ ಮತ್ತೊಂದು ಆದೇಶ ಮಾಡಿಸಲು ಮುಂದಾಗಿದ್ದಾರೆ. ಗಡಿಜಿಲ್ಲೆಗಳ ಭೇಟಿ ಪ್ರಯುಕ್ತ ಇಂದು ಮಂಗಳೂರಿಗೆ ಬಂದಿಳಿದ ಸಿಎಂ ಬೊಮ್ಮಾಯಿ, ವಿಮಾನನಿಲ್ದಾಣದಲ್ಲಿ ಗಾರ್ಡ್ ಆಫ್ ಆನರ್ ಬೇಡ ಎಂದಿದ್ದರು. ಸರ್ಕಾರಿ ಕಚೇರಿಗಳಿಗೆ ಭೇಟಿ ಕೊಟ್ಟಾಗ ಮಾತ್ರ ಗಾರ್ಡ್ ಆಫ್ ಆನರ್ ನೀಡಿ. ಉಳಿದ ಕಾರ್ಯಕ್ರಮಗಳಿಗೆ ಹಾಗೂ ಹೋಗುವಾಗ ಬರುವಾಗ ಗಾರ್ಡ್​ ಆಫ್​ ಆನರ್ ಬೇಡ … Continue reading ಹಾರ-ತುರಾಯಿ ಬದಲು ಪುಸ್ತಕ ಆಯ್ತು; ಇದೀಗ ಮತ್ತೊಂದು ಆದೇಶ ಹೊರಡಿಸಲು ಸಜ್ಜಾಗಿದ್ದಾರೆ ಸಿಎಂ ಬೊಮ್ಮಾಯಿ..