ಬೆಂಗಳೂರು: ರೋಹಿಣಿ ಸಿಂಧೂರಿ ಹಾಗು ಡಿ. ರೂಪಾ ವಿರುದ್ಧ ಕ್ರಮ ತೆಗೆದುಕೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ ಮಾಡಿದ್ದಾರೆ.
ಸಿಎಸ್ಗೆ ಸೂಚನೆ ನೀಡಿದ ನಂತರವೂ ಇಬ್ಬರೂ ಅಧಿಕಾರಿಗಳು ಮಾಧ್ಯಮಗಳಿಗೆ ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಇಬ್ಬರನ್ನೂ ವರ್ಗಾವಣೆ ಮಾಡಿ ಕಡ್ಡಾಯ ರಜೆಗೆ ಕಳಿಸಲು ತಿರ್ಮಾನ ತೆಗೆದುಕೊಳ್ಳಲಾಗಿದೆ. ವರ್ಗಾವಣೆ ಮಾಡಿ ಸ್ಥಳವನ್ನು ತೋರಿಸದ ತಿರ್ಮಾನದ ಬಗ್ಗೆಯೂ ಆಲೋಚನೆ ನಡೆಯುತ್ತಿದೆ.
ಇಂದು ಅಥವಾ ನಾಳೆ ಈ ಬಗ್ಗೆ ಆದೇಶ ಹೊರಬೀಳುವ ಸಾಧ್ಯತೆ ಇದ್ದು ಪ್ರಕರಣದ ಬಗ್ಗೆ ನಿನ್ನೆ ಸಚಿವ ಸಂಪುಟ ಸಭೆಯಲ್ಲೂ ಸಚಿವರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭ ಸಚಿವರು, ಈ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಬೊಮ್ಮಾಯಿಗೆ ಆಗ್ರಹಿಸಿದ್ದರು.
ಹಲವು ಸಚಿವರಿಗೆ ಈ ಪ್ರಕರಣದ ಬಗ್ಗೆ ಅಸಮಧಾನ ಆಗಿದ್ದು ಇಬ್ಬರ ಅಧಿಕಾರಿಗಳ ವರ್ತನೆಯಿಂದ ಸರ್ಕಾರಕ್ಕೆ ಮುಜುಗರ ಆಗಿದೆ. ಇಬ್ಬರೂ ಅಧಿಕಾರಿಗಳು ಅತೀರೇಕದ ವರ್ತನೆ ಮಾಡಿರುವ ಕಾರಣ ಕ್ರಮ ಕೈಗೊಳ್ಳಿ ಎಂದು ಸಚಿವರು ಹೇಳಿದ್ದರು.