ಬೆಂಗಳೂರು : ಇನ್ನು ಮುಂದೆ ಕೋವಿಡ್ ಹೆಚ್ಚಿರುವ ಜಿಲ್ಲೆಗಳಿಗೆ ಪ್ರತಿ ವಾರ ಅಥವಾ ಹದಿನೈದು ದಿನಕ್ಕೊಮ್ಮೆ ಭೇಟಿ ನೀಡಿ ಪರಿಶೀಲನೆ ನಡೆಸುವ ಆಲೋಚನೆ ಮಾಡಿರುವುದಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಇಂದು ಬೆಳಿಗ್ಗೆ ತುಮಕೂರಿಗೆ ತೆರಳುವ ಮುನ್ನ ಸಿಎಂ ಈ ಹೇಳಿಕೆ ನೀಡಿದ್ದಾರೆ. ಇಂದು ತುಮಕೂರಿನಲ್ಲಿ ಕೋವಿಡ್ ಸ್ಥಿತಿಗತಿ ಬಗ್ಗೆ ಬಿಎಸ್ವೈ ಪರಿಶೀಲನಾ ಸಭೆ ನಡೆಸಲಿದ್ದಾರೆ.
ಶಿಕ್ಷೆಯಾಗಲಿದೆ: ಬೆಂಗಳೂರಿನಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿಎಂ ಬಿಎಸ್ವೈ, “ಇದೊಂದು ಅಮಾನುಷ ಕೃತ್ಯ. ಇದನ್ನು ಯಾರೂ ಕೂಡ ಸಹಿಸೋದಿಲ್ಲ. ಇಂಥವರಿಗೆ ತಕ್ಕ ಶಿಕ್ಷೆಯಾಗಬೇಕು. ಇವರ ವಿರುದ್ದವೂ ಸೂಕ್ತ ಕ್ರಮ ಕೈಗೊಳ್ಳುತ್ತೇವೆ” ಎಂದಿದ್ದಾರೆ.
ಸುಖಾಸುಮ್ಮನೆ ಮಾತನಾಡಬೇಡಿ, ದೇಶದ ಕಾನೂನು ಪಾಲಿಸಿ : ಟ್ವಿಟರ್ಗೆ ಸರ್ಕಾರದ ತಿರುಗೇಟು