ನವದೆಹಲಿ: ದೇಶದ ಗಮನ ಸೆಳೆದಿರುವ ಹತ್ರಾಸ್ ಅತ್ಯಾಚಾರ ಪ್ರಕರಣ ಭಾರಿ ಸದ್ದು ಮಾಡುತ್ತಿರುವ ಬೆನ್ನಿಗೆ ಇದೀಗ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಹತ್ವದ ಹೆಜ್ಜೆಯೊಂದನ್ನು ಇರಿಸಿದ್ದಾರೆ.
ಪ್ರಕರಣದ ವಿರುದ್ಧ ವಿರೋಧ ಪಕ್ಷಗಳು ಕಿಡಿಕಾರುತ್ತಿರುವ ನಡುವೆ ಅವರು ಹತ್ರಾಸ್ ಗ್ಯಾಂಗ್ರೇಪ್ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ಸಿಎಂ ಯೋಗಿ ಆದಿತ್ಯನಾಥ ಅವರು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.
ಇದನ್ನೂ ಓದಿ: ಚಾಹಲ್-ಪಡಿಕಲ್ ಸಾಹಸ, ಲಯ ಕಂಡ ಕೊಹ್ಲಿ, ಆರ್ಸಿಬಿಗೆ 3ನೇ ಗೆಲುವು
ಈ ನಡುವೆ ವಿರೋಧದ ನಡುವೆಯೂ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಹತ್ರಾಸ್ಗೆ ತೆರಳಿ ಸಂತ್ರಸ್ತೆಯ ಕುಟುಂಬಸ್ಥರನ್ನು ಭೇಟಿ ಮಾಡಿದ್ದಾರೆ. ಜಗತ್ತಿನ ಯಾವ ಶಕ್ತಿಯೂ ಸಂತ್ರಸ್ತೆಯ ಕುಟುಂಬದ ದನಿಯನ್ನು ಹತ್ತಿಕ್ಕಲಾಗದು ಎಂದು ರಾಹುಲ್ ಹೇಳಿದ್ದಾರೆ. ಮತ್ತೊಂದೆಡೆ, ಎಲ್ಲ ರಾಜಕೀಯಕ್ಕಾಗಿ, ನ್ಯಾಯಕ್ಕಾಗಿ ಅಲ್ಲ ಎಂಬುದಾಗಿ ರಾಹುಲ್ ಭೇಟಿಯನ್ನು ಸಚಿವೆ ಸ್ಮೃತಿ ಇರಾನಿ ಟೀಕಿಸಿದ್ದಾರೆ. (ಏಜೆನ್ಸೀಸ್)