ಸಾಧನಾ ಸಮಾವೇಶದಲ್ಲಿ ಖಾಲಿ ಕುರ್ಚಿಗೆ ಸಿಎಂ ಭಾಷಣ: ಜೆಡಿಎಸ್ ಲೇವಡಿ|JDS mocks

blank

ಬೆಂಗಳೂರು: ಭ್ರಷ್ಟ ಕಾಂಗ್ರೆಸ್ ಸರ್ಕಾರದ 2 ವರ್ಷಗಳ ಸಾಧನೆ ಶೂನ್ಯ ಎಂಬುದಕ್ಕೆ ಖಾಲಿ ಕುರ್ಚಿಗೆ ಭಾಷಣವೇ ಸಾಕ್ಷಿ(CM’s speech to an empty chair at Sadhana convention)ಎಂದು ಜೆಡಿಎಸ್(JDS) ಟೀಕಿಸಿದೆ.

ಸಾಕಪ್ಪ ಸಾಕು, ಕಾಂಗ್ರೆಸ್ ಸರ್ಕಾರ ಅಂತ ಜನರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬೈರದೇನಹಳ್ಳಿಯಲ್ಲಿ ನಡೆದ ಚೊಚ್ಚಲ ಸಾಧನಾ ಸಮಾವೇಶಕ್ಕೆ ಬಾರದೇ ದೂರ ಉಳಿದ್ದಾರೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶಕ್ಕೆ ಇದು ಮತ್ತೊಂದು ಉದಾಹರಣೆ ಎಂದು ಜೆಡಿಎಸ್ ಆರೋಪ ಮಾಡಿದೆ.

ಆಹಾರ ಸಚಿವ ಕೆ.ಎಚ್.ಮುನಿಯಪ್ಪ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಸಾಧನಾ ಸಮಾವೇಶಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಿಎಂ ಸಿದ್ದರಾಮಯ್ಯ ಭಾಷಣ ಮಾಡುವಾಗಲೂ ಜನರೇ ಇರಲಿಲ್ಲ. ಜನರೇ ಇಲ್ಲದೆ ಸಮಾವೇಶದಲ್ಲಿ ಖಾಲಿ ಕುರ್ಚಿಗಳಿಗೆ ಸಿದ್ದರಾಮಯ್ಯ ಖಾಲಿ ಭಾಷಣ ಮಾಡುವಂತಾಗಿದ್ದು ದುರಂತ ಎಂದು ಟಾಂಗ್ ಕೊಟ್ಟಿದೆ.

ಇದು ಭ್ರಷ್ಟ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ಆಡಳಿತ, ಬೆಲೆ ಏರಿಕೆಗೆ ಜನಸಾಮಾನ್ಯರು ಬೇಸತ್ತಿರುವುದನ್ನು ಸೂಚಿಸುತ್ತಿದೆ. ರಾಜ್ಯದಲ್ಲಿ ಒಂದು ಸಮುದಾಯದ ತುಷ್ಟೀಕರಣ, ಅಧಿಕಾರಕ್ಕಾಗಿ ಒಡೆದು ಆಳುತ್ತ, ಮತಕ್ಕಾಗಿ ಜಾತಿ-ಜಾತಿಗಳ ನಡುವೆ ಜಾತಿಕಿಚ್ಚು ಹಚ್ಚಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶಕ್ಕೆ ಇದು ಮತ್ತೊಂದು ಉದಾಹರಣೆ ಎಂದು ಜೆಡಿಎಸ್ ಲೇವಡಿ ಮಾಡಿದೆ.

Share This Article

ಅನಾನಸ್​ ತಿನ್ನುವುದರಿಂದ ಎಷ್ಟೆಲ್ಲಾ ಲಾಭಗಳು ಗೊತ್ತಾ! ಆರೋಗ್ಯದ ಪ್ರಯೋಜನ ತಿಳಿಯಿರಿ.. Health Tips

Health Tips : ಸಿಹಿ ಮತ್ತು ಹುಳಿ ರುಚಿಯನ್ನು ಹೊಂದಿರುವ ಆಕರ್ಷಕ ಹಳದಿ ಹಣ್ಣಾದ ಅನಾನಸ್,…

ಬೇಸಿಗೆಯಲ್ಲಿ ಕೊತ್ತಂಬರಿ, ಪುದೀನ ಒಣಗುತ್ತಿದೆಯೇ? ತಾಜಾವಾಗಿಡಲು ಈ ರೀತಿ ಮಾಡಿ | Summer

Summer: ಜನರು ಬೇಸಿಗೆಯಲ್ಲಿ ತಮ್ಮ ದೇಹವನ್ನು ತಂಪಾಗಿಡಲು ಪುದೀನ ಎಲೆಗಳನ್ನು ಹೆಚ್ಚಾಗಿ ಬಳಸುತ್ತಾರೆ. ಪುದೀನ ಮತ್ತು…

ನೀವು ತಪ್ಪದೇ ಈ ಆಹಾರಗಳನ್ನು ತಿನ್ನಲೇಬೇಕು… ಇವು ಕೆಟ್ಟ ಕೊಲೆಸ್ಟ್ರಾಲ್‌ನ ಶತ್ರುಗಳು! Cholesterol

Cholesterol : ಆರೋಗ್ಯವೇ ಭಾಗ್ಯ ಎಂಬುದು ಎಲ್ಲರಿಗೂ ಗೊತ್ತಿದೆ. ಆರೋಗ್ಯವಾಗಿರಬೇಕೆಂದರೆ, ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು. ಅದರಲ್ಲೂ…