More

    ಎಕ್ಸಾಂ ದಿನವೇ 8ನೇ ಮಹಡಿಯಿಂದ ಹಾರಿ ಪ್ರಾಣ ಕಳ್ಕೊಂಡ ವಿದ್ಯಾರ್ಥಿ: ಕಾರಣ ಇದೇನಾ?

    ಬೆಂಗಳೂರು: ವಿದ್ಯಾರ್ಥಿಯೊಬ್ಬ ತನ್ನ ಎಕ್ಸಾಂ ದಿನವೇ ಎಂಟನೇ ಮಹಡಿಯಿಂದ ಹಾರಿ ಪ್ರಾಣ ಕಳೆದುಕೊಂಡ ಪ್ರಕರಣ ನಡೆದಿದೆ. ಕೆಲವು ತಿಂಗಳ ಹಿಂದೆ ವಿದ್ಯಾರ್ಥಿಯೊಬ್ಬ ತಪ್ಪನ್ನು ಮಾಡಿ, ಆತ್ಮಹತ್ಯೆ ಮಾಡಿಕೊಂಡಿದ್ದ ಮಾದರಿಯಲ್ಲೇ ಈ ವಿದ್ಯಾರ್ಥಿಯ ಪ್ರಕರಣ ನಡೆದಿದೆ ಎನ್ನಲಾಗಿದೆ.

    ಮೂಲತಃ ಮಂಗಳೂರಿನ ಆದಿತ್ಯ ಪ್ರಭು (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಬೆಂಗಳೂರಿನ ಪಿಇಎಸ್​ ಕಾಲೇಜಿನಲ್ಲಿ ಬಿಟೆಕ್ ಸೆಕೆಂಡ್ ಸೆಮಿಸ್ಟರ್​​ನಲ್ಲಿ ವ್ಯಾಸಂಗ ಮಾಡುತ್ತಿದ್ದ. ಇಂದು ಪರೀಕ್ಷೆ ಕೂಡ ನಡೆಯುತ್ತಿತ್ತು.

    ಇದನ್ನೂ ಓದಿ: ಅಪಾರ್ಟ್​ಮೆಂಟ್ ಹತ್ತನೇ ಮಹಡಿಯಿಂದ ಹಾರಿದ ವಿದ್ಯಾರ್ಥಿ; ತಪ್ಪು ಮಾಡಿ ಸಿಕ್ಕಿಬಿದ್ದ ಮುಜುಗರ ಎದುರಿಸಲಾಗದೆ ಸಾವಿಗೆ ಶರಣು..

    ಇವತ್ತು ಪರೀಕ್ಷೆ ಸಂದರ್ಭದಲ್ಲಿ ಈತ ಕಾಪಿ ಮಾಡಿದ್ದು, ಆ ವಿಷಯ ಗೊತ್ತಾಗಿ ಆತ್ಮಹತ್ಯೆ ಮಾಡಿಕೊಂಡಿದ್ದ ಎಂಬ ಆರೋಪವೂ ಇದೆ. ಆ ಕಾರಣಕ್ಕೆ ಈತ ಎಂಟನೇ ಮಹಡಿಯಿಂದ ಹಾರಿಕೊಂಡಿದ್ದಾನೆ ಎನ್ನಲಾಗಿದೆ ಎಂದು ದಕ್ಷಿಣವಲಯದ ಡಿಸಿಪಿ ಕೃಷ್ಣಕಾಂತ್ ಹೇಳಿದ್ದಾರೆ.

    ಇದನ್ನೂ ಓದಿ: ಸ್ಪೆಷಲ್​ ಮಸಾಲೆ ದೋಸೆ ಜತೆ ಸಾಂಬಾರ್ ನೀಡದ್ದಕ್ಕೆ ಹೋಟೆಲ್ ಮಾಲೀಕರಿಗೆ 3,500 ರೂ. ದಂಡ!

    ಕಳೆದ ವರ್ಷದ ನವೆಂಬರ್​ನಲ್ಲಿ ಬೆಂಗಳೂರಿನ ಖಾಸಗಿ ಶಾಲೆಯೊಂದರ ಮೊಹಿನ್ ಎಂಬ ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿಬಿದ್ದಿದ್ದು, ಶಿಕ್ಷಕರು ಆ ತಪ್ಪಿಗಾಗಿ ಹೊರಗೆ ನಿಲ್ಲಿಸಿದ್ದರು ಎಂದು ಮನನೊಂದು, ಹತ್ತನೇ ಮಹಡಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದ.

    ಎದೆಹಾಲಿನಿಂದಲೇ ಗಿನ್ನೆಸ್ ದಾಖಲೆ ಮಾಡಿದ ಮಹಾತಾಯಿ!; ಇಷ್ಟೊಂದು ಎದೆಹಾಲು ಇದುವರೆಗೆ ಯಾರೂ ಕೊಟ್ಟಿಲ್ಲ!

    ತಂದೆ-ತಾಯಿಯಿಂದ ದೂರ ಮಾಡಿದ್ದಕ್ಕೆ ಪತ್ನಿಯನ್ನೇ ಕೊಲೆ ಮಾಡಿಸಲು ಮುಂದಾದ ಪತಿ: ಆರು ತಿಂಗಳ ಬಳಿಕ ಆಗಿದ್ದೇನು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts