More

    ಕೋಲುಮಂಡೆ ವಿವಾದ: ರ‍್ಯಾಪರ್​ ಚಂದನ್ ಶೆಟ್ಟಿ ವಿರುದ್ಧ ದೂರು

    ಬೆಂಗಳೂರು: “ಕೋಲುಮಂಡೆ ಜಂಗಮ ದೇವರು” ರ‍್ಯಾಪ್​ ಸಾಂಗ್ ವಿವಾದ ಪೊಲೀಸ್​ ಠಾಣೆ ಮೆಟ್ಟಿಲೇರಿದ್ದು, ರ‍್ಯಾಪರ್​ ಚಂದನ್ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ.

    ಹಿಂದು ಧಾರ್ಮಿಕ ಭಾವನೆಗಳಿಗೆ ದಕ್ಕೆ ತರುವ ರೀತಿಯಲ್ಲಿ ಜಾನಪದ ಗೀತೆಯನ್ನು ಚಿತ್ರೀಕರಣ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಚಂದನ್ ಶೆಟ್ಟಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಬಜರಂಗದಳ ಮುಖಂಡ ತೇಜಸ್ ಗೌಡ ದೂರು ನೀಡಿದ್ದು, ಪೊಲೀಸರು ಎನ್​ಸಿಆರ್​ ದಾಖಲಿಸಿದ್ದಾರೆ.

    ಇದನ್ನೂ ಓದಿರಿ ವರವಾದ ವಿವಾದ: ಕೋಲುಮಂಡೆ ಸಾಂಗ್​ ವಿರುದ್ಧ ಆಕ್ರೋಶದ ಬೆನ್ನಲ್ಲೇ ಚಂದನ್​ ಶೆಟ್ಟಿಗೆ ಬಂಪರ್​!

    ಆ. 22ರಂದು ಯೂಟ್ಯೂಬ್‌ನಲ್ಲಿ “ಕೋಲುಮಂಡೆ ಜಂಗಮ ದೇವರು” ರ‍್ಯಾಪ್​ ಸಾಂಗ್ ಅನ್ನು ಚಂದನ್​ ಶೆಟ್ಟಿ ಬಿಡುಗಡೆ ಮಾಡಿದ್ದರು. ಈ ಬಗ್ಗೆ ವಿವಾದ ಶುರುವಾಗುತ್ತಿದ್ದಂತೆ ನಿನ್ನೆ(ಮಂಗಳವಾರ) ಸ್ಪಷ್ಟನೆ ನೀಡಿದ್ದ ಚಂದನ್​ ಶೆಟ್ಟಿ, ಯಾವುದೇ ವ್ಯಕ್ತಿ, ಜಾತಿ ಮತ್ತು ಧರ್ಮಕ್ಕೆ ಅವಮಾನ ಮಾಡುವ ಉದ್ದೇಶದಿಂದ ಸಾಂಗ್​ ಮಾಡಿಲ್ಲ. ಒಳ್ಳೆಯ ಉದ್ದೇಶದಿಂದ ಸಾಂಗ್​ ಮಾಡಿದ್ದೇವೆ. ಇದರಿಂದ ನಿಮಗೆ ನೋವಾಗಿದ್ದರೆ ನಮ್ಮ ಇಡೀ ತಂಡದ ಪರವಾಗಿ ಕ್ಷಮೆಯಾಚಿಸುತ್ತೇನೆ ಎನ್ನುವ ಮೂಲಕ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದರು.

    ತೀವ್ರ ವಿರೋಧದ ಬೆನ್ನಲ್ಲೇ ಕೋಲುಮಂಡೆ ರ‍್ಯಾಪ್​ ಸಾಂಗ್ ಯೂಟ್ಯೂಬ್​ನಿಂದ ನಾಪತ್ತೆ!

    ಕನ್ನಡ ಕಿರುತೆರೆ ನಟಿಗೆ ವರದಕ್ಷಿಣೆ ಕಿರುಕುಳ, ಠಾಣೆ ಮೆಟ್ಟಿಲೇರಿದ ಸಂತ್ರಸ್ತೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts