ಬೆಂಗಳೂರು: “ಕೋಲುಮಂಡೆ ಜಂಗಮ ದೇವರು” ರ್ಯಾಪ್ ಸಾಂಗ್ ವಿವಾದ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ರ್ಯಾಪರ್ ಚಂದನ್ ಶೆಟ್ಟಿ ವಿರುದ್ಧ ದೂರು ದಾಖಲಾಗಿದೆ.
ಹಿಂದು ಧಾರ್ಮಿಕ ಭಾವನೆಗಳಿಗೆ ದಕ್ಕೆ ತರುವ ರೀತಿಯಲ್ಲಿ ಜಾನಪದ ಗೀತೆಯನ್ನು ಚಿತ್ರೀಕರಣ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಚಂದನ್ ಶೆಟ್ಟಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಬಜರಂಗದಳ ಮುಖಂಡ ತೇಜಸ್ ಗೌಡ ದೂರು ನೀಡಿದ್ದು, ಪೊಲೀಸರು ಎನ್ಸಿಆರ್ ದಾಖಲಿಸಿದ್ದಾರೆ.
ಇದನ್ನೂ ಓದಿರಿ ವರವಾದ ವಿವಾದ: ಕೋಲುಮಂಡೆ ಸಾಂಗ್ ವಿರುದ್ಧ ಆಕ್ರೋಶದ ಬೆನ್ನಲ್ಲೇ ಚಂದನ್ ಶೆಟ್ಟಿಗೆ ಬಂಪರ್!
ಆ. 22ರಂದು ಯೂಟ್ಯೂಬ್ನಲ್ಲಿ “ಕೋಲುಮಂಡೆ ಜಂಗಮ ದೇವರು” ರ್ಯಾಪ್ ಸಾಂಗ್ ಅನ್ನು ಚಂದನ್ ಶೆಟ್ಟಿ ಬಿಡುಗಡೆ ಮಾಡಿದ್ದರು. ಈ ಬಗ್ಗೆ ವಿವಾದ ಶುರುವಾಗುತ್ತಿದ್ದಂತೆ ನಿನ್ನೆ(ಮಂಗಳವಾರ) ಸ್ಪಷ್ಟನೆ ನೀಡಿದ್ದ ಚಂದನ್ ಶೆಟ್ಟಿ, ಯಾವುದೇ ವ್ಯಕ್ತಿ, ಜಾತಿ ಮತ್ತು ಧರ್ಮಕ್ಕೆ ಅವಮಾನ ಮಾಡುವ ಉದ್ದೇಶದಿಂದ ಸಾಂಗ್ ಮಾಡಿಲ್ಲ. ಒಳ್ಳೆಯ ಉದ್ದೇಶದಿಂದ ಸಾಂಗ್ ಮಾಡಿದ್ದೇವೆ. ಇದರಿಂದ ನಿಮಗೆ ನೋವಾಗಿದ್ದರೆ ನಮ್ಮ ಇಡೀ ತಂಡದ ಪರವಾಗಿ ಕ್ಷಮೆಯಾಚಿಸುತ್ತೇನೆ ಎನ್ನುವ ಮೂಲಕ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದರು.
ತೀವ್ರ ವಿರೋಧದ ಬೆನ್ನಲ್ಲೇ ಕೋಲುಮಂಡೆ ರ್ಯಾಪ್ ಸಾಂಗ್ ಯೂಟ್ಯೂಬ್ನಿಂದ ನಾಪತ್ತೆ!
ಕನ್ನಡ ಕಿರುತೆರೆ ನಟಿಗೆ ವರದಕ್ಷಿಣೆ ಕಿರುಕುಳ, ಠಾಣೆ ಮೆಟ್ಟಿಲೇರಿದ ಸಂತ್ರಸ್ತೆ