More

    ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣ ಚರ್ಚೆ, ಸರ್ಕಾರಿ ಭರವಸೆಗಳ ಸಮಿತಿ ಸಭೆ

    ಉಡುಪಿ: ಜಿಲ್ಲೆಯಲ್ಲಿ ಕೇವಲ ಒಂದು ಖಾಸಗಿ ವೈದ್ಯಕೀಯ ಕಾಲೇಜು ಮಾತ್ರ ಕಾರ್ಯಾಚರಿಸುತ್ತಿದ್ದು, ಸರ್ಕಾರಿ ವೈದ್ಯಕೀಯ ಕಾಲೇಜಿನ ಬೇಡಿಕೆ ಬಗ್ಗೆ ಯೋಜನೆ ರೂಪಿಸುವ ಬಗ್ಗೆ ಸರ್ಕಾರಿ ಭರವಸೆಗಳ ಸಮಿತಿ ಅಧ್ಯಕ್ಷ, ಶಾಸಕ ಕೆ. ರಘುಪತಿ ಭಟ್ ಅಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿ ಗುರುವಾರ ನಡೆದ ಸಮಿತಿ ಸಭೆಯಲ್ಲಿ ಚರ್ಚಿಸಿದರು.

    ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಬಾಕಿ ಇರುವ ಭರವಸೆಗಳ ಬಗ್ಗೆ ಇಲಾಖಾಧಿಕಾರಿಗಳ ಜೊತೆ ಚರ್ಚಿಸುವ ಸಂದರ್ಭದಲ್ಲಿ ಉಡುಪಿಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸುವ ಪ್ರಸ್ತಾವನೆಯ ಕುರಿತು ಅಧಿಕಾರಿಗಳ ಗಮನ ಸೆಳೆದರು. ಈಗಾಗಲೇ ಜಿಲ್ಲಾಸ್ಪತ್ರೆಯನ್ನು 250 ಬೆಡ್‌ಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಯೋಜನೆಗೆ ಅನುಮೋದನೆ ದೊರಕಿದೆ. ಆಸ್ಪತ್ರೆಯ 10 ಕಿ.ಮೀ. ವ್ಯಾಪ್ತಿಯಲ್ಲಿ ಉಪ್ಪೂರಿನಲ್ಲಿ ಕಾಲೇಜಿಗಾಗಿ 20 ಎಕರೆ ಜಾಗವನ್ನು ಗುರುತಿಸಲಾಗಿದೆ ಎಂದರು.

    ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ. ಕೆ. ಅನಿಲ್ ಕುಮಾರ್, ಜಂಟಿ ಕಾರ್ಯದರ್ಶಿ ಎಂ. ಶಿಲ್ಪಾ, ಕಿಮ್ಸ್ ಹುಬ್ಬಳ್ಳಿ ನಿರ್ದೇಶಕ ಡಾ. ರಾಮಲಿಂಗಪ್ಪ ಸಿ.ಎ., ಬಿಮ್ಸ್ ನಿರ್ದೇಶಕ ಡಾ.ಶಿವಕುಮಾರ್ ಸಿ. ಆರ್. ಉಪಸ್ಥಿತರಿದ್ದರು.

    ಬಿಎಸ್ಸಿ ನರ್ಸಿಂಗ್ ಕಾಲೇಜು
    ಜಿಲ್ಲಾಸ್ಪತ್ರೆಗೆ ಹೊಂದಿಕೊಂಡಂತೆ ಈ ವರ್ಷದಿಂದಲೇ ಬಿಎಸ್ಸಿ ನರ್ಸಿಂಗ್ ಕಾಲೇಜು ಆರಂಭಿಸುವ ಬಗ್ಗೆ ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಕುಲಸಚಿವ ಶಿವಾನಂದ ಕಾಪಶಿ ಅವರಿಗೆ ಕೆ.ರಘುಪತಿ ಭಟ್ ಮನವಿ ಮಾಡಿದರು. ಶೀಘ್ರದಲ್ಲಿ ಕಾಲೇಜು ಮಂಜೂರು ಮಾಡುವುದಾಗಿ ಭರವಸೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts