More

    ಶಿವಮೊಗ್ಗದಲ್ಲಿ ಮತ್ತೆ ಕೋಮುಸಂಘರ್ಷ; 2 ಗುಂಪುಗಳ ಮಧ್ಯೆ ಗಲಾಟೆ, ಕಲ್ಲು ತೂರಾಟ, ಚಾಕು ಇರಿತ..

    ಶಿವಮೊಗ್ಗ: ಮಲೆನಾಡಿನ ಶಿವಮೊಗ್ಗದಲ್ಲಿ ಮತ್ತೆ ಕೋಮುಸಂಘರ್ಷ ಉಂಟಾಗಿದ್ದು, ಎರಡು ಗುಂಪುಗಳ ಮಧ್ಯೆ ಗಲಾಟೆ, ಕಲ್ಲು ತೂರಾಟ, ಚಾಕು ಇರಿತ ನಡೆದಿದೆ. ಶಿವಮೊಗ್ಗದ ಭದ್ರಾವತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

    ಭದ್ರಾವತಿಯ ಗಾಂಧಿ ವೃತ್ತದಲ್ಲಿ ಘಟನೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಅರವಿಂದ್, ಗೌತಮ್ ಎಂಬುವರಿಗೆ ಗಾಯಗಳಾಗಿದ್ದು, ಅವರನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಸ್ಪತ್ರೆ ಬಳಿ ಮತ್ತೆ ಎರಡು ಕೋಮಿನ ನಡುವೆ ಗಲಾಟೆ, ಕಲ್ಲು ತೂರಾಟ ನಡೆದಿದೆ. ಅಲ್ಲದೆ ಹರೀಶ್ ಎಂಬುವನಿಗೆ ಗಾಯವಾಗಿದ್ದು, ರಿಜ್ವಾನ್ ಎಂಬಾತನ ಚಾಕು ಇರಿತಕ್ಕೆ ಒಳಗಾಗಿದ್ದಾನೆ. ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಗಲಾಟೆ ನಡೆದ ಸ್ಥಳಕ್ಕೆ ಭದ್ರಾವತಿ ಹಳೇನಗರ ಪೊಲೀಸರು ಭೇಟಿ ನೀಡಿ, ಗುಂಪುಗಳನ್ನು ಚದುರಿಸಿದ್ದು, ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ. ಅಲ್ಲದೆ ಕಾನೂನು ಸುವ್ಯವಸ್ಥೆಗಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

    ಯಂತ್ರಕ್ಕೆ ಸೀರೆ ಸಿಲುಕಿ ಪ್ರಾಣ ಕಳ್ಕೊಂಡ ಮಹಿಳೆ; ಗೋವಿನಜೋಳ ರಾಶಿ ಮಷಿನ್​ಗೆ ಸಿಕ್ಕಿ ದೇಹ ಛಿದ್ರ..

    ಮೋದಿ-ಯೋಗಿ ಬಿಟ್ಟರೆ ಇನ್ಯಾರು?; 25 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಖರ ಹಿಂದೂವಾದಿಗಳೇ ಅಭ್ಯರ್ಥಿಗಳು!

    ಮಟನ್ ತರಲು ಹೋದವ ಮರಳಿ ಬರಲೇ ಇಲ್ಲ!; ಬೈಕ್​ಸಮೇತ ಎಳೆದೊಯ್ದ ಮಿನಿಲಾರಿ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts