More

    ಸುಳ್ಳು ಪ್ರಕರಣ ಕೈಬಿಡಿ

    ಮೈಸೂರು: ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮದಲ್ಲಿ ನಡೆದಿರುವ ಗಲಭೆ ಪ್ರಕರಣದಲ್ಲಿ ಸಣ್ಣಹನುಮಂತಪ್ಪ ಎಂಬುವರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿ ಬುಧವಾರ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ-ಲೆನಿನ್ ವಾದಿ) ಲಿಬರೇಷನ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.


    ಆ.11ರಂದು ಹುಲಿಹೈದರ್ ಗ್ರಾಮದಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಇಬ್ಬರು ಕೊಲೆಯಾಗಿದ್ದಾರೆ. ಒಬ್ಬ ತೀವ್ರವಾಗಿ ಗಾಯಗೊಂಡು ಜೀವನ್ಮರಣ ಹೋರಾಟ ಮಾಡುತ್ತಿದ್ದಾನೆ. ಗಲಭೆ ಪ್ರಕರಣದಲ್ಲಿ ಸಣ್ಣಹನುಮಂತಪ್ಪನ ವಿರುದ್ಧ ಉದ್ದೇಶ ಪೂರ್ವಕವಾಗಿ ಸುಳ್ಳು ಆರೋಪ ಹೊರಿಸಿ, ಮೊದಲ ಆರೋಪಿಯನ್ನಾಗಿ ಮಾಡಿರುವುದು ಖಂಡನೀಯ ಎಂದು ಕಿಡಿಕಾರಿದರು.


    ಸಣ್ಣಹನುಮಂತಪ್ಪ ಮತ್ತು ಇತರರ ವಿರುದ್ಧ ದಾಖಲಿಸಿರುವ ಸುಳ್ಳು ಪ್ರಕರಣ ಹಿಂಪಡೆಯಬೇಕು ಮತ್ತು ಅವರ ಮೇಲಿರುವ ಆರೋಪಗಳನ್ನು ಕೈಬಿಡಬೇಕು. ಇಡೀ ಗಲಭೆ ಪ್ರಕರಣಕ್ಕೆ ಕಾರಣಕರ್ತರಾದ ಹನುಮೇಶ್ ನಾಯಕ ಮತ್ತು ರಮೇಶ್ ನಾಯಕರನ್ನು ತಕ್ಷಣವೇ ಬಂಧಿಸಿ ಸೂಕ್ತ ತನಿಖೆ ನಡೆಸಬೇಕು. ಹುಲಿಹೈದರ್ ಗ್ರಾಮದಲ್ಲಿ ಶಾಂತಿ, ನ್ಯಾಯ ಮತ್ತು ಸಾಮರಸ್ಯವನ್ನು ಕಾಪಾಡಲು ಅಗತ್ಯ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು. ಬಳಿಕ ಜಿಲ್ಲಾಧಿಕಾರಿ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.


    ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಚೌಡಹಳ್ಳಿ ಜವರಯ್ಯ, ಸುಂದ್ರಮಣಿ, ನಾ.ದಿವಾಕರ, ಜಯರಾಂ, ಪಿ.ಎ. ಕುಮಾರ, ಗಂಗಾಧರ, ರವಿಕುಮಾರ, ನಂಜುಂಡಯ್ಯ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts