ಸಂಘಟನೆಯಿಂದ ಸಮುದಾಯ ಬೆಳವಣಿಗೆ

blank

ಗೋಳಿಯಂಗಡಿ: ಸಂಘಟನೆ ಮೂಲಕ ಸಮುದಾಯ ಬೆಳವಣಿಗೆ ಸಾಧ್ಯ. ಸಂವಿಧಾನದಲ್ಲಿ ಕಾನೂನು, ಜಾತಿ, ಧರ್ಮ ಭೇದಭಾವವಿಲ್ಲದೆ ಸಮಾಜದಲ್ಲಿ ಎಲ್ಲರಿಗೂ ಸರಿಸಮಾನ ಅವಕಾಶಗಳಿವೆ ಎಂದು ಶಂಕರನಾರಾಯಣ ಪೊಲೀಸ್ ಠಾಣೆ ಉಪ ನಿರೀಕ್ಷಕ ನಾಸೀರ್ ಹುಸೇನ್ ಹೇಳಿದರು.

ಗೋಳಿಯಂಗಡಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಭಾಂಗಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮಘರ್ಜನೆ ಹೆಬ್ರಿ, ಬ್ರಹ್ಮಾವರ, ಕುಂದಾಪುರ ತಾಲೂಕು ಸಮಿತಿ ಆಶ್ರಯದಲ್ಲಿ ಗ್ರಾಮ ಶಾಖೆ ಪದಾಧಿಕಾರಿಗಳ ಪದಗ್ರಹಣ, ಗ್ರಾಪಂನಿಂದ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ಕಾರ್ಯಾಗಾರವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ, ಭೀಮಘರ್ಜನೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಡಾ.ಉದಯ ಕುಮಾರ್ ತಲ್ಲೂರು ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಉಡುಪಿ ಜಿಲ್ಲಾ ಸಂಚಾಲಕ ಚಂದ್ರ ಅಲ್ತಾರ್ ಅಧ್ಯಕ್ಷತೆ ವಹಿಸಿದ್ದರು. ಸಂಘಟನಾ ಸಂಚಾಲಕ ಸುಧಾಕರ ಸುರ‌್ಗೋಳಿ, ರಾಜೇಶ್ ಕೆಮ್ಮಣ್ಣು, ಶಶಿ ಬಳ್ಕೂರು, ಆವರ್ಸೆ ಗ್ರಾಪಂ ಉಪಾಧ್ಯಕ್ಷೆ ಆರತಿ, ಸದಸ್ಯೆ ರೇಣುಕಾ, ಶಾರದಾ, ಅಣ್ಣಪ್ಪ ಆವರ್ಸೆ, ಗೋಪಾಲ ಮೀಯ್ಯರು, ಕೃಷ್ಣ ಅಲ್ತಾರು, ಬೆಳ್ವೆ ಗ್ರಾಪಂ ಮಾಜಿ ಸದಸ್ಯೆ ಯಶೋದಾ, ಸುಬ್ಬಣ್ಣ ಆವರ್ಸೆ, ರಾಜು ಸುರ‌್ಗೋಳಿ, ಶೀನ ಹೆರ್ಮುಂಡೆ, ಮಂಗಳೂರು ಜಿಲ್ಲಾ ಸಂಚಾಲಕ ಸತೀಶ್ ಮೂಡುಬಿದಿರೆ ಉಪಸ್ಥಿತರಿದ್ದರು.

ಸತೀಶ್ ಸುರ‌್ಗೋಳಿ ಸ್ವಾಗತಿಸಿದರು. ಪೂರ್ವಿಕಾ ಅಲ್ತಾರು ಸಂವಿಧಾನ ಪೀಠಿಕೆ ವಾಚಿಸಿದರು. ಶಿವಾನಂದ ಸುರ‌್ಗೋಳಿ ಕಾರ್ಯಕ್ರಮ ನಿರೂಪಿಸಿದರು. ಶ್ರೀನಿವಾಸ ತೊನ್ನಾಸೆ ವಂದಿಸಿದರು.

ಸಾಂಪ್ರದಾಯಿಕ ಕೃಷಿಯಿಂದ ಲಾಭ ಗಳಿಕೆ

ಕಟ್ಟಡ ಕಾರ್ಮಿಕರಿಂದ ಸಂಭ್ರಮಾಚರಣೆ

 

Share This Article

ಅಪ್ಪಿತಪ್ಪಿಯೂ ಈ ಆಹಾರಗಳನ್ನು ತುಪ್ಪದೊಂದಿಗೆ ಸೇವಿಸಬೇಡಿ; ಉತ್ತಮ ಆರೋಗ್ಯಕ್ಕಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದಲ್ಲಿ ತುಪ್ಪವು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ…

ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಪ್ರಪಂಚದಾದ್ಯಂತ ಕಾಫಿ ಪ್ರಿಯರನ್ನು ಕಾಣಬಹುದು. ಇಲ್ಲಿಯವರೆಗೆ ಕಾಫಿಯ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆದಿದ್ದು, ಇದು ಅದರ…

ಕಪ್ಪು ದ್ರಾಕ್ಷಿ vs ಹಸಿರು ದ್ರಾಕ್ಷಿ.. ಆರೋಗ್ಯಕ್ಕೆ ಯಾವುದು ಉತ್ತಮ..? grapes

grapes: ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಹಸಿರು…