ಆನೇಕಲ್: ಎರಡು ತಿಂಗಳ ಹಿಂದೆ ಕಂಪನಿ ಕ್ಲೋಸ್ ಮಾಡಿದ್ದ ವ್ಯಕ್ತಿಯ ಬದುಕು ಕೂಡ ಇದೀಗ ಅಂತ್ಯವಾಗಿದ್ದು, ಎಸ್ಟೀಮ್ ಕಾರಿನಲ್ಲಿ ಶವ ಅನಾಥವಾಗಿರುವುದು ಕಂಡುಬಂದಿದೆ. ಅನುಮಾನಾಸ್ಪದ ರೀತಿಯಲ್ಲಿ ಶವ ಪತ್ತೆಯಾಗಿದೆ.
ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಹುಲಿಮಂಗಲ ಸಮೀಪದ ನಂಜಾಪುರ ರಸ್ತೆಯಲ್ಲಿ ಈ ಶವ ಪತ್ತೆಯಾಗಿದೆ. ಶವ ಕಂಡುಬಂದಿರುವ ಮಾರುತಿ ಎಸ್ಟೀಮ್ ಕಾರಿನ ಎಲ್ಲ ಗ್ಲಾಸ್ ಕ್ಲೋಸ್ ಆಗಿದ್ದು, ಸಾವಿಗೀಡಾದ ವ್ಯಕ್ತಿ ಬೆಂಗಳೂರಿನ ಡೇರಿ ಸರ್ಕಲ್ ನಿವಾಸಿ ಪಾರ್ಥಸಾರಥಿ ಎಂದು ಗುರುತಿಸಲಾಗಿದೆ. ಸಾವಿಗೂ ಮುನ್ನ ಈ ವ್ಯಕ್ತಿ ಬೇಸರದಲ್ಲಿ ಗದ್ಗದಿತರಾಗಿ ತಮಿಳಿನಲ್ಲಿ ಮಾತನಾಡುತ್ತ ನೋವು ತೋಡಿಕೊಂಡ ವಿಡಿಯೋ ತುಣುಕುಗಳು ಕೂಡ ಲಭಿಸಿವೆ.
ಇದನ್ನೂ ಓದಿ: ಸಾಲಕ್ಕೆ ಹೆದರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ; ಅದಲ್ಲದೇ ಇತ್ತು ಬೇರೆ ಸಮಸ್ಯೆ..
ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ಕಂಪನಿಯೊಂದನ್ನು ಹೊಂದಿದ್ದ ಇವರು ನಷ್ಟದಿಂದಾಗಿ ಎರಡು ತಿಂಗಳ ಹಿಂದೆ ಅದನ್ನು ಕ್ಲೋಸ್ ಮಾಡಿದ್ದರು. ಅವರ ಶವ ಕಾರಿನ ಡ್ರೈವರ್ ಸೀಟ್ನಲ್ಲಿ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕಾರಿನಲ್ಲಿ ಮದ್ಯ ಹಾಗೂ ನೀರಿನ ಬಾಟಲಿ ಪತ್ತೆಯಾಗಿದೆ. ಆರ್ಥಿಕ ಮುಗ್ಗಟ್ಟಿನಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಜಿಗಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನೀನೇ ಸಾಕಿದ ಗಿಣಿ ನಿನ್ನ ಹದ್ದಾಗಿ ಕುಕ್ಕಿತಲ್ಲೋ..; ಆರ್ಟಿಐ ಕಾರ್ಯಕರ್ತನನ್ನೇ ಇಕ್ಕಟ್ಟಿಗೆ ಸಿಲುಕಿಸಿದ ಮಹಿಳಾ ಅಧಿಕಾರಿ!?