More

    9ರಂದು ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಾಗಾರ

    ಕೊಳ್ಳೇಗಾಲ: ಪಟ್ಟಣದ ಜೆಎಸ್‌ಎಸ್ ಕಾಲೇಜಿನಲ್ಲಿ ಅ.9ರಂದು ಬೆಳಗ್ಗೆ 11.30 ಗಂಟೆಗೆ ಜೆಎಸ್‌ಎಸ್ ಮಹಿಳಾ ಕಾಲೇಜು, ಜೆಎಸ್‌ಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆ ಹಾಗೂ ನಂ.1 ಕನ್ನಡ ದಿನಪತ್ರಿಕೆ ವಿಜಯವಾಣಿ ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಲೋಕಸೇವಾ ಆಯೋಗದ ನಿಕಟಪೂರ್ವ ಅಧ್ಯಕ್ಷ ಎಸ್.ಪಿ ಷಡಕ್ಷರಿಸ್ವಾಮಿ ವಹಿಸಲಿದ್ದಾರೆ. ಬೆಂಗಳೂರಿನ ಜೆಎಸ್‌ಎಸ್ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಸಂಸ್ಥೆ ಗೌರವಾಧ್ಯಕ್ಷ ಎಂ.ಬಿ.ದ್ಯಾಬೇರಿ ಉದ್ಘಾಟಿಸಲಿದ್ದಾರೆ. ವಿಜಯವಾಣಿ ದಿನಪತ್ರಿಕೆಯ ಮೈಸೂರು ಬ್ಯೂರೋ ಸ್ಥಾನಿಕ ಸಂಪಾದಕರಾದ ಎಂ.ಆರ್.ಸತ್ಯನಾರಾಯಣ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಜೆಎಸ್‌ಎಸ್ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಭು, ಜೆಎಸ್‌ಎಸ್ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಸಂಸ್ಥೆಯ ಸಂಚಾಲಕ ಲೋಲಕುಮಾರ್ ಉಪಸ್ಥಿತರಿರುವರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts