ಬೀದರ್: ಟೂರಿಸ್ಟ್ ವೀಸಾ ಪಡೆದು ಕಿರ್ಗಿಸ್ತಾನದಿಂದ ಭಾರತಕ್ಕೆ ಬಂದಿದ್ದ 8 ಮಂದಿ ಜಮಾತಿಗಳು ಬೀದರ್ನಲ್ಲಿ ಧರ್ಮ ಪ್ರಚಾರದಲ್ಲಿ ತೊಡಗಿದ್ದರು. ನಗರದ ವಿವಿಧ ಮಸೀದಿಗಳು ಹಾಗೂ ಜಿಲ್ಲೆಯ ಇತರ ಭಾಗಗಳಿಗೆ ತೆರಳಿ ಇವರು ಧರ್ಮಪ್ರಚಾರ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಇವರ ವಿರುದ್ಧ ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ವೀಸಾ ನಿಯಮ ಉಲ್ಲಂಘನೆ ಸೇರಿ ವಿವಿಧ ಆರೋಪಗಳಲ್ಲಿ ಒಟ್ಟು ನಾಲ್ಕು ಪ್ರತ್ಯೇಕ ದೂರುಗಳನ್ನು ದಾಖಲಿಸಿಕೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ.
ಮಾರ್ಚ್ 10ರಂದು ಬೀದರ್ಗೆ ಬಂದಿರುವ ಇವರೆಲ್ಲರೂ ಧರ್ಮ ಪ್ರಚಾರದಲ್ಲಿ ತೊಡಗಿದ್ದರು. ನವದೆಹಲಿಯ ನಿಜಾಮುದ್ದೀನ್ ಮರ್ಕಜ್ನಲ್ಲಿ ನಡೆದಿದ್ದ ತಬ್ಲಿಘಿ ಜಮಾತ್ನಲ್ಲೂ ಪಾಲ್ಗೊಂಡಿದ್ದರು. ಬಳಿಕ ಬೀದರ್ ನಗರಕ್ಕೆ ಮರಳಿ ಮತ್ತು ಧರ್ಮ ಪ್ರಚಾರದಲ್ಲಿ ತೊಡಗಿದ್ದರು. ಸದ್ಯ ಇವರೆಲ್ಲರನ್ನೂ ರಟಕಲಪುರಾ ಮರ್ಕಜ್ನಲ್ಲಿ ವ್ಯವಸ್ಥೆ ಮಾಡಿರುವ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಮಂಡ್ಯದಲ್ಲಿ ಐಸೋಲೇಷನ್ ವಾರ್ಡ್ನಿಂದ ಪರಾರಿಯಾಗಿದ್ದ ವ್ಯಕ್ತಿಯನ್ನು 2 ತಾಸಿನಲ್ಲಿ ಪತ್ತೆ ಮಾಡಿದ ಪೊಲೀಸರು