ತಿರುವನಂತಪುರ: ಕೆಲ ದಿನಗಳ ಹಿಂದೆ ಕೇರಳದ ಕೆಎಸ್ಆರ್ಟಿಸಿ ಬಸ್ನಲ್ಲಿ ಮಲಯಾಳಂ ನಟಿ ಹಾಗೂ ಮಾಡೆಲ್ಗೆ ಖಾಸಗಿ ಅಂಗ ಪ್ರದರ್ಶಿಸಿದ ಆರೋಪದ ಮೇಲೆ 27 ವರ್ಷದ ಯುವಕನನ್ನು ಕೇರಳ ಪೊಲೀಸರು ಬಂಧಿಸಿದ್ದರು. ಇದೀಗ ಅಖಿಲ ಕೇರಳ ಪುರುಷರ ಸಂಘ ಆರೋಪಿ ಯುವಕನ ಪರ ನಿಂತಿದ್ದು, ನಟಿಯ ವಿರುದ್ಧ ದೂರುಗಳ ಸುರಿಮಳೆಗೈದಿದೆ.
ಸ್ವಾಗತ ಕೋರಲಾಗುವುದು
ಬಂಧಿತ ಯುವಕನನ್ನು ಸಾವದ್ ಎಂದು ಗುರುತಿಸಲಾಗಿದೆ. ಈತ ಕೋಯಿಕ್ಕೊಡ್ನ ಕಯಾಕೋಡಿ ನಿವಾಸಿ. ಕೇರಳ ಪುರುಷರ ಸಂಘದ ಮುಖ್ಯಸ್ಥ ಅಜಿತ್ ಕುಮಾರ್ ಅವರು ಮಾಧ್ಯಮ ಸಂದರ್ಶನದಲ್ಲಿ ಸಾವದ್ ಪರ ಧ್ವನಿ ಎತ್ತಿದ್ದಾರೆ. ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ಸವಾದ್ ಅವರಿಗೆ ಸ್ವಾಗತ ಕೋರಲಾಗುವುದು ಎಂದು ಅಜಿತ್ ಹೇಳಿದ್ದಾರೆ. ಅಲ್ಲದೆ, ಇನ್ಸ್ಟಾಗ್ರಾಂನಲ್ಲಿ ಫಾಲೋವರ್ಸ್ ಸಂಖ್ಯೆ ಹೆಚ್ಚಿಸಿಕೊಳ್ಳಲು ದುರುದ್ದೇಶದಿಂದ ನಕಲಿ ದೂರು ದಾಖಲಿಸಿದ್ದಾರೆ ಎಂದು ನಟಿಯ ವಿರುದ್ಧ ಅಜಿತ್ ಆರೋಪ ಮಾಡಿದ್ದಾರೆ. ಆಕೆಯ ವಿರುದ್ಧ ಡಿಜಿಪಿಗೆ ದೂರು ನೀಡಿದ್ದೇವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಒಡಿಶಾ ರೈಲು ದುರಂತ: ಭಾರತ ಇತಿಹಾಸದಲ್ಲಿ ಸಂಭವಿಸಿರುವ ಭೀಕರ ರೈಲು ಅಪಘಾತಗಳ ಚಿತ್ರಣ ಇಲ್ಲಿದೆ…
ಆತ್ಮಹತ್ಯೆ ಮಾಡಿಕೊಳ್ಳುವ ಹಂತಕ್ಕೆ ಹೋಗಿದ್ದ
ಸಾವದ್ಗೆ ಇನ್ನು ಜಾಮೀನು ಮಂಜೂರು ಆಗಿಲ್ಲ. ಮ್ಯಾಜಿಸ್ಟ್ರೇಟ್ ರಜೆ ಇರುವುದರಿಂದ ನಾಳೆ ಜಾಮೀನು ಸಿಗಬಹುದು. ಆತ ಬಿಡುಗಡೆಯಾದಾಗ ಸ್ವಾಗತ ಕೋರುತ್ತೇವೆ. ಈ ಆಪಾದನೆಯಿಂದ ಆತ ಆತ್ಮಹತ್ಯೆ ಮಾಡಿಕೊಳ್ಳುವ ಹಂತಕ್ಕೆ ಹೋಗಿದ್ದ. ಮನೆಯಿಂದ ಹೊರಬರಲಾಗದ ಪರಿಸ್ಥಿತಿಯಲ್ಲಿದ್ದಾನೆ. ಅವರ ಕುಟುಂಬ ಊರನ್ನೇ ಬಿಟ್ಟಿದೆ. ಸಾವದ್ ಒಳ್ಳೆಯ ಕುಟುಂಬದಿಂದ ಬಂದವನು. ಈ ಘಟನೆಯಿಂದ ಸಂಪೂರ್ಣ ಕುಗ್ಗಿ ಹೋಗಿದ್ದಾನೆ. ಊಟವನ್ನೂ ಸಹ ಮಾಡುತ್ತಿಲ್ಲ. ಜೈಲಿನಿಂದ ಬಂದ ಬಳಿಕ ಆತ ಏನು ಮಾಡಬೇಕು? ಆತನ ಮಾನಸಿಕ ಸ್ಥಿತಿಯೇ ಬದಲಾಗಿದೆ. ಸಾವದ್ ಸ್ವಾಗತ ಸಮಾರಂಭದಲ್ಲಿ ಸಂಘದ ಸದಸ್ಯರು ಆಗಮಿಸಲಿದ್ದು, ಅವರಿಗೆ ಹೊಸ ಬದುಕು ಕಟ್ಟಿಕೊಡುವ ಕೆಲಸ ಮಾಡುತ್ತೇವೆ ಎಂದು ಅಜಿತ್ ಭರವಸೆ ನೀಡಿದ್ದಾರೆ.
ಆರಂಭದಲ್ಲಿ ನಟಿ ಮಾಡಿದ ಆರೋಪವನ್ನು ನಾನೂ ಕೂಡ ನಂಬಿದ್ದೆ. ಆದರೆ, ಘಟನೆ ನಡೆದ ಎರಡು ದಿನಗಳ ಬಳಿಕ ನಟಿ ತಮ್ಮ ಇನ್ಸ್ಟಾಗ್ರಾಂ ಐಡಿ ಬಗ್ಗೆ ಹೇಳಿದ ನಂತರ ಆಕೆಯ ಉದ್ದೇಶ ನನಗೆ ಅರ್ಥವಾಯಿತು. ಇನ್ಸ್ಟಾಗ್ರಾಂನಲ್ಲಿ ಹೆಚ್ಚಿನ ಫಾಲೋವರ್ಸ್ ಪಡೆಯುವುದು ಆಕೆಯ ತಂತ್ರ ಎಂದು ಗೊತ್ತಾಯಿತು. ಆಕೆ ತನ್ನ ಇನ್ಸ್ಟಾಗ್ರಾಂನಲ್ಲಿ ಒಳಉಡುಪು ಧರಿಸಿರುವ ಚಿತ್ರಗಳು ಮತ್ತು ವಿಡಿಯೋಗಳನ್ನು ಹೆಚ್ಚಾಗಿ ಹಂಚಿಕೊಳ್ಳುತ್ತಿರುವುದು ಸಾರ್ವಜನಿಕ ಗಮನವನ್ನು ಸೆಳೆಯಲು ಎಂದು ಸಂಘದ ಇನ್ನೊಬ್ಬ ಸದಸ್ಯರು ಹೇಳಿದರು. ಇಂತಹ ಘಟನೆಯ ಬಳಿಕ ಯಾವುದೇ ಹುಡುಗಿಯಾಗಲಿ ಅಷ್ಟೊಂದು ಕೂಲ್ ಆಗಿ ಮಾತನಾಡಲು ಸಾಧ್ಯವಾಗುವುದಿಲ್ಲ ಎಂದು ಅಜಿತ್ ಕುಮಾರ್ ಹೇಳಿದರು. ಡಿಜಿಪಿಗೆ ದೂರು ನೀಡಿದ ಬಳಿಕ ಆಕೆ ಹೊರಗೆ ಕಾಣುತ್ತಿಲ್ಲ ಎಂದು ತಿಳಿಸಿದರು.
ಇದನ್ನೂ ಓದಿ: 233 ಮಂದಿಯನ್ನು ಬಲಿಪಡೆದ ಒಡಿಶಾ ರೈಲು ದುರಂತ ಹೇಗಾಯ್ತು? ಘಟನೆಗೆ ಕಾರಣ ಏನು? ಇಲ್ಲಿದೆ ಮಾಹಿತಿ…
ಘಟನೆ ಹಿನ್ನೆಲೆ ಏನು?
ಈ ಘಟನೆ ಮೇ 16ರ ಮಂಗಳವಾರ ನಡೆದಿತ್ತು. ನಟಿ ನಂದಿತಾ ಶಂಕರ ಅವರು ಇನ್ಸ್ಟಾಗ್ರಾಂನಲ್ಲಿ ಘಟನೆಯನ್ನು ವಿವರಿಸಿದ್ದರು. ಅವರು ಹೇಳುವ ಪ್ರಕಾರ ಸಿನಿಮಾ ಶೂಟಿಂಗ್ಗಾಗಿ ಎರ್ನಾಕುಲಂಗೆ ತೆರಳುತ್ತಿದ್ದರಂತೆ. ಈ ವೇಳೆ ಅಂಗಮಾಲಿ ಬಳಿ ಆರೋಪಿ ಸಾವದ್ ಬಸ್ಸನ್ನು ಏರಿದ್ದ. ಬಳಿಕ ಇಬ್ಬರು ಮಹಿಳೆಯರು ಮಧ್ಯೆ ಬಂದು ಕುಳಿತುಕೊಂಡನಂತೆ. ಆ ಇಬ್ಬರು ಮಹಿಳೆಯರಲ್ಲಿ ನಂದಿತಾ ಕೂಡ ಒಬ್ಬರು. ಬಸ್ ಹೊರಡಲು ಆರಂಭಿಸಿದಾಗ ನಂದಿತಾ ಅವರನ್ನು ಸ್ಪರ್ಶಿಸಲು ಆರಂಭಿಸಿದ್ದಾನಂತೆ. ನಾನು ಕಿಟಕಿ ಪಕ್ಕದಲ್ಲಿ ಕುಳಿತಿದ್ದೆ. ಎಲ್ಲಿಗೆ ಹೋಗುತ್ತಿದ್ದೀರಾ ಎಂದು ಕೇಳಿದ. ಆತ ಕೇಳಿದ ಎಲ್ಲದಕ್ಕೂ ನಾನು ಉತ್ತರಿಸಿದೆ. ನೋಡಲು ಆತ ಒಳ್ಳೆಯವನಂತೆ ಕಾಣುತ್ತಿದ್ದ. ಬಸ್ ಕೆಲ ದೂರ ಸಾಗಿದ ಕೂಡಲೇ ಆತನ ಕೈ ನನ್ನ ದೇಹವನ್ನು ಸ್ಪರ್ಶಿಸುತ್ತಿರುವಂತೆ ಭಾಸವಾಯಿತು. ನಾನು ಆತನ ಕಡೆ ನೋಡಿದಾಗ ಆತನ ಒಂದು ಕೈ ಆತನ ಖಾಸಗಿ ಅಂಗದ ಮೇಲಿರುವುದನ್ನು ಗಮನಿಸಿದೆ. ಇದರಿಂದ ನನಗೆ ತೀವ್ರ ಮುಜುಗರವಾಯಿತು. ಬಳಿಕ ಬಸ್ನ ಕಿಟಕಿ ಗಾಜನ್ನು ಮೇಲಕ್ಕೇರಿಸಿ ಆತನಿಂದ ಅಂತರ ಕಾಯ್ದುಕೊಂಡೆ. ಆದರೂ ತನ್ನ ದುಷ್ಕೃತ್ಯ ಮುಂದುವರಿಸಿದ್ದ. ಮತ್ತೆ ನೋಡುವಷ್ಟರಲ್ಲಿ ತನ್ನ ಪ್ಯಾಂಟ್ ಜಿಪ್ ತೆರೆದು ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ. ಈ ಕ್ಷಣದಲ್ಲಿ ಏನು ಮಾಡಬೇಕೆಂದು ತೋಚಲಿಲ್ಲ. ಬಳಿಕ ಮೊಬೈಲ್ನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಂಡು ಏನು ನಿನ್ನ ಸಮಸ್ಯೆ ಎಂದು ಆತನನ್ನು ಪ್ರಶ್ನೆ ಮಾಡಿದೆ. ಪ್ರಶ್ನೆ ಕೇಳುತ್ತಿದ್ದಂತೆಯೇ ಆತ ತಕ್ಷಣ ತನ್ನ ಪ್ಯಾಂಟ್ ಜಿಪ್ ಅನ್ನು ಹಾಕಿಕೊಂಡನು. ನಾನು ನನ್ನ ಧ್ವನಿಯನ್ನು ಜೋರು ಮಾಡಿದೆ. ಈ ವೇಳೆ ಬಸ್ ಸಿಬ್ಬಂದಿ ಬಳಿ ಬಂದರು. ನಡೆದ ಘಟನೆಯನ್ನು ಅವರ ಮುಂದೆ ವಿವರಿಸಿದೆ. ದೂರು ನೀಡುತ್ತೀರಾ ಎಂದು ಬಸ್ ಕಂಡಕ್ಟರ್ ಪ್ರಶ್ನಿಸಿದರು. ನಾನು ಹೌದು ಎಂದೆ. ಈ ವೇಳೆ ಆರೋಪಿ ತನ್ನ ಪ್ಯಾಂಟ್ ಜಿಪ್ ಓಪನ್ ಆಗಿಲ್ಲ ಎಂದು ವಾದಿಸಿದನು. ಬಸ್, ವಿಮಾನ ನಿಲ್ದಾಣದ ಹತ್ತಿರ ನಿಲ್ಲುತ್ತಿದ್ದಂತೆ ಹಾಗೂ ಬಸ್ನ ಬಾಗಿಲು ತೆರೆಯುತ್ತಿದ್ದಂತೆ ಆತ ಓಡಿ ಹೋದ. ಬಳಿಕ ಕಂಡಕ್ಟರ್ ಮತ್ತು ಡ್ರೈವರ್ ಸ್ಥಳೀಯರ ನೆರವಿನಿಂದ ಚೇಸ್ ಮಾಡಿ ಹಿಡಿದರು ಎಂದು ನಂದಿತಾ ವಿಡಿಯೋದಲ್ಲಿ ವಿವರಿಸಿದ್ದರು (ಏಜೆನ್ಸೀಸ್)
View this post on Instagram
ಬಸ್ಸಿನಲ್ಲಿ ಮಹಿಳೆಯರಿಬ್ಬರ ಮಧ್ಯೆ ಕುಳಿತು ಕಾಮಚೇಷ್ಟೆ: ವಿಡಿಯೋ ಹರಿಬಿಟ್ಟು ಘಟನೆ ವಿವರಿಸಿದ ನಟಿ
ಮತ್ತೊಂದು ನೀಚ ಕೃತ್ಯ: KSRTC ಬಸ್ ಏರಿದ ಯುವ ವೈದ್ಯೆಯ ಮುಂದೆಯೇ ವಿಕೃತಿ ಮೆರೆದ ಯುವಕ