ಬೆಂಗಳೂರು: ಹೊರ ರಾಜ್ಯ ಹಾಗೂ ವಿದೇಶಗಳಿಂದ ರಾಜ್ಯಕ್ಕೆ ಬರುವವರು ಕಡ್ಡಾಯ ಕ್ವಾರಂಟೈನ್ಗೆ ಒಳಪಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಬೇರೆ ದೇಶ ಹಾಗೂ ರಾಜ್ಯದಿಂದ ಕನ್ನಡಿಗರು ವಾಪಸ್ ಬರುತ್ತಿದ್ದು ಅವರನ್ನು ಯಾವ ರೀತಿ ಕ್ವಾರಂಟೈನ್ ಮಾಡಬೇಕು ಎನ್ನುವ ಬಗ್ಗೆ ಸಿಎಂ ಚರ್ಚೆ ನಡೆಸಿದರು.
ಇದನ್ನೂ ಓದಿ; ಮೌಂಟ್ ಎವರೆಸ್ಟ್ ಬುಡಕ್ಕೂ ಬಂತು ಚೀನಾ ಗಡಿ ತಂಟೆ ವಿವಾದ
ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳು
* ಹೊರ ರಾಜ್ಯದಿಂದ ಬರುವ ಕನ್ನಡಿಗರು ನಿರ್ದಿಷ್ಟ ವ್ಯವಸ್ಥೆಯಡಿ ಬರುವಂತೆ ಮಾಡಬೇಕು
* ರಾಜ್ಯಕ್ಕೆ ಬರುವವರು ಕಡ್ಡಾಯವಾಗಿ ಆನ್ಲೈನ್ನಲ್ಲಿ ನೋಂದಣಿ ಮಾಡಿಕೊಳ್ಳಬೇಕು.
* ಎಲ್ಲಿಗೆ ಬರುತ್ತೇವೆ ಮತ್ತು ಯಾವಾಗ ಬರುತ್ತೇವೆ ಎನ್ನುವುದನ್ನು ತಿಳಿಸಬೇಕು.
* ರಾಜ್ಯದಿಂದ ಅನಿರ್ವಾಯವಾಗಿ ಹೊರ ಹೋಗಿ ಸಂಕಷ್ಟದಲ್ಲಿ ಸಿಲುಕಿದವರಾಗಿರಬೇಕು.
* ನೋಂದಣಿ ಮಾಡಿಕೊಂಡವರನ್ನು ಕ್ವಾರಂಟೈನ್ ಸೌಲಭ್ಯಕ್ಕೆ ಅನುಗುಣವಾಗಿ ಕರೆಯಿಸಿಕೊಳ್ಳಲಾಗುವುದು
* ಬಂದ ತಕ್ಷಣ ಯಾರೂ ಕೂಡ ಅವರ ಊರಿಗೆ ಹೋಗುವಂತಿಲ್ಲ, 14 ದಿನ ಕ್ವಾರಂಟೈನ್ ಆಗಲೇಬೇಕು. ಇದಕ್ಕೆ ಸಿದ್ಧವಿದ್ದವರು ಮಾತ್ರ ನೋಂದಣಿ ಮಾಡಿಕೊಳ್ಳಬೇಕು
* ಹೊರ ರಾಜ್ಯದಿಂದ ರೈಲುಗಳಲ್ಲಿ ಬರುವವರಿಗೆ ರಾಜ್ಯ ಸರ್ಕಾರವೇ ವೆಚ್ಚ ಭರಿಸುತ್ತದೆ.
* ಬೇರೆ ರಾಜ್ಯದಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದರೂ ಇಲ್ಲಿಯೂ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡಿಸಲೇಬೇಕು
* ಬೇರೆ ರಾಜ್ಯದಲ್ಲಿ ಮೃತರಾದರೆ ಶವಗಳನ್ನು ರಾಜ್ಯಕ್ಕೆ ತರುವಂತಿಲ್ಲ. ಎಲ್ಲಿ ಮೃತರಾಗಿರುತ್ತಾರೋ ಅಲ್ಲಿಯೇ ಅಂತ್ಯ ಸಂಸ್ಕಾರ ಮಾಡಬೇಕು
* ರಾಜ್ಯದಲ್ಲಿ ತೀರಿಕೊಂಡರೆ ತೀರಿಕೊಂಡ ಸ್ಥಳದಲ್ಲಿಯೇ ಅಂತ್ಯಕ್ರಿಯೆ ಮಾಡಬೇಕು
ಇದನ್ನೂ ಓದಿ; ಬೆಂಗಳೂರಿನಲ್ಲಿ ಆಸ್ಪತ್ರೆಗಳಿಗೆ ಅಲೆದಾಡಿದ ಕರೊನಾ ಶಂಕಿತ, ಸೋಂಕು ದೃಢವಾದರೆ ಕಾದಿದೆ ಅಪಾಯ
ಸೋಮವಾರ (ಮೇ 11) ಪ್ರಧಾನಿನರೇಂದ್ರ ಮೋದಿ ಜತೆ ವಿಡಿಯೋ ಕಾನ್ಫರೆನ್ಸ್ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ನಿಲುವು ಏನು ಇರಬೇಕು ಎಂಬ ಬಗ್ಗೆ ಚರ್ಚೆ ನಡೆಸಿದ್ದೇವೆ. ವಿದೇಶ ಹಾಗೂ ಬೇರೆ ರಾಜ್ಯದಿಂದಲೂ ಜನರು ಬರುತ್ತಿದ್ದಾರೆ. ಅವರ ಬಗ್ಗೆ ಏನು ನಿರ್ಧಾರ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಚರ್ಚೆ ಮಾಡಿದ್ದೇವೆ. ಅವರನ್ನು ಇನ್ಸ್ಟಿಟ್ಯೂಟ್ ಕ್ವಾರಂಟೈನ್ ಮಾಡಲು ನಿರ್ಧರಿಸಲಾಗಿದೆ. ಹೊರ ರಾಜ್ಯದಿಂದ ಬರುವವರಿಗೆ ಅವರ ಜಿಲ್ಲೆಯಲ್ಲೆ ಕ್ವಾರಂಟೈನ್ ಮಾಡಲಾಗುವುದು. ಬೇರೆ ರಾಜ್ಯದಿಂದ ಬರುವವರಿಗೆ ರೈಲಿನ ವ್ಯವಸ್ಥೆ ಮಾಡಲಾಗಿದೆ. ಆ ರಾಜ್ಯದಲ್ಲಿ ತಪಾಸಣೆ ಮಾಡಿಸಿದ್ದರೂ ಇಲ್ಲಿಯೂ ತಪಾಸಣೆ ಮಾಡಿಸಲೇಬೇಕು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿಕೆ ನೀಡಿದ್ದಾರೆ.
ಕಾರ್ಮಿಕರನ್ನು ಬೆಂಗಳೂರಿಗೆ ಕರೆತರಲು ಜಿಲ್ಲೆಗಳಿಂದ ಹೊರಡುತ್ತಿವೆ ವಿಶೇಷ ಬಸ್ಗಳು