ಹುಬ್ಬಳ್ಳಿ: ನಗರದಲ್ಲಿ ಕೋಮುಸಂಘರ್ಷದ ಹಿನ್ನೆಲೆಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪೊಲೀಸ್ ಠಾಣೆ ಎದುರೇ ಕಲ್ಲು ತೂರಾಟ ನಡೆದಿದ್ದು, ಪೊಲೀಸ್ ಜೀಪನ್ನು ಪಲ್ಟಿ ಮಾಡಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
ಮಸೀದಿ ಮೇಲೆ ಭಗವಾಧ್ವಜ ಹಾರಿಸಿದಂಥ ವಿಡಿಯೋ ಸ್ಟೇಟಸ್ಗೆ ಹಾಕಿಕೊಂಡಿದ್ದರಿಂದ ಇಂಥದ್ದೊಂದು ಗಲಾಟೆಗೆ ಮೂಲಕಾರಣವಾಗಿದೆ. ಆನಂದ ನಗರ ಘೋಡಕೆ ಫ್ಲ್ಯಾಟ್ ನಿವಾಸಿಯೊಬ್ಬ ಹೀಗೊಂದು ಎಡಿಟೆಡ್ ವಿಡಿಯೋ ಸ್ಟೇಟಸ್ಗೆ ಹಾಕಿಕೊಂಡಿದ್ದ. ಈ ವಿಷಯ ತಿಳಿದ ಕೂಡಲೇ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಆ ಯುವಕನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದಾರೆ.
ಯುವಕನನ್ನು ವಶಕ್ಕೆ ಪಡೆದ ವಿಷಯ ತಿಳಿಯುತ್ತಿದ್ದಂತೆ ನೂರಾರು ಜನ ಠಾಣೆ ಬಳಿ ಜಮಾಯಿಸಿದ್ದಾರೆ. ಇದರಿಂದ ಸ್ಥಳದಲ್ಲಿ ಆತಂಕ ಸೃಷ್ಟಿಯಾಗಿದೆ. ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಪೊಲೀಸರು ಯುವಕನ ವಿಚಾರಣೆ ನಡೆಸುತ್ತಿದ್ದಾರೆ.
ಈ ವೇಳೆ ಠಾಣೆ ಬಳಿ ಜಮಾಯಿಸಿದ ಒಂದು ಸಮುದಾಯದ ಜನರು ಕಲ್ಲುತೂರಾಟ ನಡೆಸಿದ್ದು, ಪೊಲೀಸ್ ಜೀಪ್ ಪಲ್ಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನರನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದು, ಅಶ್ರವಾಯು ಸಿಡಿಸುತ್ತಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಬಾಲಿವುಡ್ ಮೇಲೆ ಅಣುಬಾಂಬ್!; ನಿರ್ದೇಶಕ ರಾಮ್ಗೋಪಾಲ್ ವರ್ಮಾ ಹೀಗಂದಿದ್ದೇಕೆ?