ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ

ಭಕ್ತರಿಗಾಗಿ ಅಮ್ಮನಲ್ಲಿ ಪ್ರಾರ್ಥಿಸಿ, ಪ್ರಸಾದ ಕೊಡುವ ಅರ್ಚಕರನ್ನು ಅಮ್ಮನೇ ಅನುಗ್ರಹಿಸಿದ್ದಾಳೆ. ಇದೆಲ್ಲವೂ ಅಮ್ಮನ ಪವಾಡ. ಶ್ರೀನಿವಾಸ ತಂತ್ರಿ ಅವರಿಗೆ ಅಮ್ಮನ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ವರ್ಷದಲ್ಲೇ ಪ್ರಶಸ್ತಿ ಬಂದಿರುವುದು ಸಂಭ್ರಮಕ್ಕೆ ಕಾರಣ ಎಂದು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಹೇಳಿದರು.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಪು ಶ್ರೀಹೊಸ ಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯಾ ಅವರನ್ನು ಅಭಿನಂದಿಸಿ ಮಾತನಾಡಿದರು.
ಅಭಿನಂದನೆ ಸ್ವೀಕರಿಸಿದ ಶ್ರೀನಿವಾಸ ತಂತ್ರಿ ಶುಭಹಾರೈಸಿದರು. ಎನ್.ಆರ್. ದಾಮೋದರ ಶರ್ಮಾ ಬಾರ್ಕೂರು ಅಭಿನಂದನಾ ಭಾಷಣ ಮಾಡಿದರು. ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ, ಕಾರ್ಯನಿರ್ವಹಣಾಧಿಕಾರಿ ಕೆ. ರವಿಕಿರಣ್, ಪ್ರಮುಖರಾದ ದಿವಾಕರ ಶೆಟ್ಟಿ, ಮಾಧವ ಆರ್, ಯೋಗೀಶ್ ಶೆಟ್ಟಿ, ರತ್ನಾಕರ ಶೆಟ್ಟಿ, ನಾರಾಯಣ್ ಶೆಟ್ಟಿ, ಲಕ್ಷ್ಮೆಶ ತಂತ್ರಿ, ಬೀನಾ ವಿ, ಗೀತಾಂಜಲಿ ಎಂ, ಶಿಲ್ಪಾ ಜಿ, ಗೋವರ್ಧನ್ ಸೇರಿಗಾರ್, ಲಕ್ಷ್ಮಣ್ ಶೆಟ್ಟಿ ಉಪಸ್ಥಿತರಿದ್ದರು. ನಿರ್ಮಲ್ ಕುಮಾರ್ ಹೆಗ್ಡೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.