More

    ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ

    ಚಿಕ್ಕೋಡಿ: ಕೆಪಿಸಿಸಿ ರಾಜ್ಯ ಘಟಕದ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ ಪ್ರತಿಜ್ಞಾ ವಿಧಿ ಸ್ವೀಕರಿಸುತ್ತಿದ್ದಂತೆಯೇ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

    ಇಂದಿರಾ ನಗರದಲ್ಲಿ ಡಿಜಿಟಲ್ ಕಾನ್ಫರೆನ್ಸ್ ಮುಖಾಂತರ ಕಾಂಗ್ರೆಸ್ ಕಾರ್ಯಕರ್ತರು ಅಧ್ಯಕ್ಷ, ಕಾರ್ಯಾಧ್ಯಕ್ಷರ ಪ್ರತಿಜ್ಞಾ ವಿಧಿ ಕಾರ್ಯಕ್ರಮ ವೀಕ್ಷಿಸಿದರು. ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಘಟಕದಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾಧ್ಯಕ್ಷ ಲಕ್ಷ್ಮಣರಾವ ಚಿಂಗಳೆ ಉದ್ಘಾಟಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ ಕುಲಕರ್ಣಿ ಹಾಗೂ ಪುರಸಭೆ ಸದಸ್ಯ ಸಾಭೀರ ಜಮಾದಾರ ಸಂವಿಧಾನ ಪೀಠಿಕೆ ಓದಿದರು.

    ಚಿಕ್ಕೋಡಿ ಹಾಗೂ ನಿಪ್ಪಾಣಿ ಭಾಗದ ವಿವಿಧೆಡೆ ಕಾರ್ಯಕ್ರಮ ನಡೆಯಿತು. ಅಂತರ ಕಾಪಾಡಿಕೊಳ್ಳಲು ಒಂದೊಂದು ಕಾರ್ಯಕ್ರಮದಲ್ಲಿ ನಿಗದಿತ ಜನರು ಸೇರಿ ಟಿವಿ ಹಾಗೂ ಎಲ್‌ಇಡಿ ಮೂಲಕ ಡಿಕೆಶಿ ಪದಗ್ರಹಣ ಕಾರ್ಯಕ್ರಮ ವೀಕ್ಷಿಸಿದರು. ಜಿಲ್ಲಾ ಕಾಂಗ್ರೆಸ್ ಕಮಿಟಿ ಸದಸ್ಯರಾದ ರವಿ ಮಿರ್ಜೆ, ಪ್ರಭಾಕರ ಕೋರೆ, ಎಚ್.ಎಸ್.ನಸಲಾಪೂರೆ, ರಾಮಾ ಮಾನೆ, ವರ್ಧಮಾನ ಸದಲಗೆ, ಗುಲಾಬ ಹುಸೇನ್ ಬಾಗವಾನ, ರಾಜು ಗುಲಗುಂಜಿ, ಬಾಬು ಸಮತಶೆಟ್ಟಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts