ನವದೆಹಲಿ: ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷರಾಗಿದ್ದ ಕನ್ಹಯ್ಯಾ ಕುಮಾರ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಘಟಕದ(NSUI) ಎಐಸಿಸಿ ಉಸ್ತುವಾರಿಯಾಗಿ ಕಾಂಗ್ರೆಸ್ ಪಕ್ಷ ನೇಮಿಸಿ ಆದೇಶ ಹೊರಡಿಸಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕನ್ಹಯ್ಯಾ ಕುಮಾರ್ ಅವರನ್ನು ತಕ್ಷಣದಿಂದಲ್ಲೇ ಜಾರಿಗೆ ಬರುವಂತೆ NSUI ಉಸ್ತುವಾರಿಯಾಗಿ ತಕ್ಷಣದಿಂದಲೇ ಅನ್ವಯವಾಗುವಂತೆ ನೇಮಿಸಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಣೆಯನ್ನು ಹೊರಡಿಸಿದ್ದಾರೆ.
ನೀರಜ್ ಕುಂದನ್ರವರು ಹಾಲಿ NSUI ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಪಾದಯಾತ್ರೆಯಲ್ಲಿ ಕನ್ಹಯ್ಯಾ ಕುಮಾರ್ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹೆಜ್ಜೆ ಹಾಕಿದ್ದರು.