More

    ವಿಜಯನಗರದಲ್ಲಿ ನಾನೊಬ್ಬ ಪ್ರಬಲ‌ ಆಕಾಂಕ್ಷಿ: ಸೈಯದ್ ಮಹಮ್ಮದ್

    ಹೊಸಪೇಟೆ: ವಿಜಯನಗರ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್‌ನಿಂದ ಅಲ್ಪಸಂಖ್ಯಾತರಿಗೆ ಅವಕಾಶ ನೀಡಬೇಕು. ಜೊತೆಗೆ ಈ ಕ್ಷೇತ್ರದಲ್ಲಿ ನಾನೂ ಒಬ್ಬ ಪ್ರಬಲ ಸ್ಪರ್ಧಾಕಾಂಕ್ಷಿ ಎಂದು ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿ ಸೈಯದ್ ಮಹಮ್ಮದ್ ಕೆ. ಒತ್ತಾಯಿಸಿದರು.
    ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯ ಹರಪನಹಳ್ಳಿ ಮತ್ತು ವಿಜಯನಗರ ವಿಧಾನಸಭಾ ಕ್ಷೇತ್ರಗಳು ಸಾಮಾನ್ಯವಾಗಿದ್ದು, ಇನ್ನುಳಿದವು ಮೀಸಲು ಕ್ಷೇತ್ರಗಳು. ವಿಜಯನಗರ ಕ್ಷೇತ್ರದಲ್ಲಿ ಮುಸ್ಲಿಂ ಸಮಾಜದ ಜನರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ ಸಾಮಾಜಿಕ ನ್ಯಾಯದ ಆಧಾರದಲ್ಲಿ ಅಲ್ಪಸಂಖ್ಯಾತರಿಗೆ ಅವಕಾಶ ನೀಡಬೇಕು. ಈ ಕುರಿತು ಈಗಾಗಲೇ ಕೆಪಿಸಿಸಿ ಮೈನಾರಿಟಿ ಸೆಲ್ ನಾಯಕರ ಗಮನ ಸೆಳೆದಿದ್ದಾಗಿ ತಿಳಿಸಿದರು.
    ಅಲ್ಪಸಂಖ್ಯಾತರು ಸೇರಿದಂತೆ ವಿಜಯನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರಲ್ಲಿ ನಾನೊಬ್ಬ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ನಮ್ಮ ತಾತನ ಕಾಲದಿಂದಲೂ ಕಾಂಗ್ರೆಸ್‌ನಲ್ಲಿದ್ದೇವೆ. ನಾನು ಕೂಡಾ ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತನಾಗಿ, ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ರಾಜ್ಯ ಮಟ್ಟದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಜೊತೆಗೆ ರೋಟರಿ ಕ್ಲಬ್ ಅಧ್ಯಕ್ಷನಾಗಿ, ಶೈಕ್ಷಣಿಕ, ಸಾಮಾಜಿಕ ಸೇವೆ ಸಲ್ಲಿಸುತ್ತಿದ್ದೇನೆ. ಹೊಸಪೇಟೆ ಅಂಜುಮನ್ ಕಮಿಟಿ ಕಾರ್ಯದರ್ಶಿ ಯಾಗಿ ಮುಸ್ಲಿಂ ಸಮಾಜದ ಸೇವೆ ಸಲ್ಲಿಸುತ್ತಿದ್ದೇನೆ.
    ಅದರ ಆಧಾರದ ಮೇಲೆ ಟಿಕೆಟ್ ಬಯಸಿದ್ದೇನೆ. ಅಂತಿಮವಾಗಿ ವರಿಷ್ಠರ ತೀರ್ಮಾನಕ್ಕೆ ಬದ್ಧ. ಒಂದೊಮ್ಮೆ ಪಕ್ಷ ಅವಕಾಶ ನೀಡದಿದ್ದರೂ, ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಸ್ವತಂತ್ರ ಸ್ಪರ್ಧೆ, ಪಕ್ಷಾಂತರದ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಡಪಡಿಸಿದರು.
    ಸುದ್ದಿಗೋಷ್ಠಿಯಲ್ಲಿ ನಗರಸಭೆ ಸದಸ್ಯ ಹುಲುಗಪ್ಪ, ವೆಂಕಟೇಶ, ಮೊಹಮ್ಮದ್ ಭಾಷಾ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts