More

    ಕಾಂಗ್ರೆಸ್‌ ಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದ ನಡ್ಡಾ

    ಹೊನ್ನಾಳಿ: ಕಾಂಗ್ರೆಸ್‌ ಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಜೈಲಿನಲ್ಲಿರಬೇಕಾದ ಕಾಂಗ್ರೆಸ್ಸಿಗರು ಬೇಲ್ ಮೇಲೆ ಹೊರಗಡೆ ಓಡಾಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಾಗ್ದಾಳಿ ನಡೆಸಿದರು.

    ಭಾನುವಾರ ನಗರದಲ್ಲಿ ಹಮ್ಮಿಕೊಂಡಿದ್ದ ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್‌ ನ ಡಿ.ಕೆ. ಶಿವಕುಮಾರ್, ಕೇಂದ್ರದಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅವರು ಬೇಲ್ ಮೇಲೆ ಓಡಾಡುತ್ತಿದ್ದಾರೆ. ಬೇಲ್ ಇಲ್ಲದಿದ್ದರೆ ಇಷ್ಟೊತ್ತಿಗೆ ಜೈಲ್‌ನಲ್ಲಿರುತ್ತಿದ್ದರು ಎಂದು ವ್ಯಂಗ್ಯವಾಡಿದರು.

    ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಲಕ್ಷಾಂತರ ಕೋಟಿ ಭ್ರಷ್ಟಾಚಾರ ಮಾಡಿ ಈಗ ಬಿಜೆಪಿ ವಿರುದ್ಧ ಸುಳ್ಳು ಭ್ರಷ್ಟಾಚಾರದ ಆರೋಪ ಹೊರಿಸುತ್ತಿದ್ದಾರೆ ಎಂದು ಕಿಡಿಕಾರಿದರು.

    ಭಾರತ ಇದೀಗ ವಿಶ್ವದ 5 ನೇ ಅತಿ ದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆದಿದೆ. ಈ ಮೊದಲು ಚೀನಾ ದೇಶದಿಂದ ಶೇ. 2ರಷ್ಟು ಮೊಬೈಲ್ ಆಮದು ಮಾಡಿಕೊಳ್ಳಲಾಗುತ್ತಿತ್ತು. ಆದರೀಗ ಶೇ. 97ರಷ್ಟು ಮೊಬೈಲ್ ಭಾರತವೇ ತಯಾರಿಸುತ್ತಿದೆ. ಕಾರುಗಳ ಉತ್ಪಾದನೆಯಲ್ಲಿ ಜಪಾನ್ ದೇಶವನ್ನು ಹಿಂದಿಕ್ಕಿದೆ ಎಂದರು.

    ಆಯುಷ್ಮಾನ್ ಯೋಜನೆಗೆ ಸಿದ್ದರಾಮಯ್ಯ ಸರ್ಕಾರ ಸ್ಪಂದಿಸಲಿಲ್ಲ. ಆದರೀಗ ಅತಿ ವೇಗವಾಗಿ ಬಡವರಿಗೆ ಈ ಯೋಜನೆ ತಲುಪುತ್ತಿದೆ. 62 ಲಕ್ಷ ಜನರಿಗೆ ಈ ಕಾರ್ಡ್ ವಿತರಣೆಯಾಗಿದೆ ಎಂದರು.

    ಶಾಸಕ ಎಂ.ಪಿ. ರೇಣುಕಾಚಾರ್ಯ ಮಾತನಾಡಿ, ತಾಲೂಕಿನಲ್ಲಿ ನಾನು ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ಮತದಾರರು ಮತ್ತೊಮ್ಮೆ ನನಗೆ ಆಶೀರ್ವದಿಸಬೇಕು ಎಂದರು.

    ಸಂಸದ ಜಿ.ಎಂ. ಸಿದ್ದೇಶ್ವರ್ ಮಾತನಾಡಿದರು. ಎಂಎಲ್‌ಸಿ ನವೀನ್, ಮಾಜಿ ಮುಖ್ಯ ಸಚೇತಕ ಶಿವಯೋಗಿಸ್ವಾಮಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ವೀರೇಶ್ ಹನಗವಾಡಿ, ತಾಲೂಕು ಬಿಜೆಪಿ ಅಧ್ಯಕ್ಷ ಜೆ.ಕೆ. ಸುರೇಶ್, ಪುರಸಭೆ ಅಧ್ಯಕ್ಷೆ ಸುಮಾ ಮಂಜುನಾಥ್, ಎ.ಬಿ. ಹನುಮಂತಪ್ಪ, ವೀಕ್ಷಕ ಭರತ್, ಶಾಂತರಾಜ್ ಪಾಟೀಲ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts