More

    ಮಂಡ್ಯದಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ: ಅಭ್ಯರ್ಥಿ ರವಿಕುಮಾರ್ ಗಣಿಗ ವಿಶ್ವಾಸ

    ಮಂಡ್ಯ: ಜಿಲ್ಲೆಯ ಆರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಹಾಗೂ ಮೇಲುಕೋಟೆ ಕ್ಷೇತ್ರದಲ್ಲಿ ನಮ್ಮ ಪಕ್ಷದ ಬೆಂಬಲ ಅಭ್ಯರ್ಥಿ ಗೆಲುವಿನ ಮೂಲಕ ಏಳು ಸ್ಥಾನಗಳು ಕೈವಶವಾಗಲಿದೆ ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪಿ.ರವಿಕುಮಾರ್ ಗಣಿಗ ವಿಶ್ವಾಸ ವ್ಯಕ್ತಡಿಸಿದರು.
    ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಜೆಡಿಎಸ್ ಮತ್ತು ಬಿಜೆಪಿ ಮುಖಂಡರನ್ನು ಪಕ್ಷಕ್ಕೆ ಬರಮಾಡಿಕೊಂಡ ಮಾತನಾಡಿದ ಅವರು, ಕಾಂಗ್ರೆಸ್ ಸಿದ್ದಾಂತ ಒಪ್ಪಿ ಹಲವರು ಪಕ್ಷ ಸೇರ್ಪಡೆಯಾಗುವುದರ ಜತೆಗೆ ನನ್ನ ಗೆಲುವಿಗೆ ಶ್ರಮಿಸುತ್ತಿರುವುದರಿಂದ ಮಂಡ್ಯದಲ್ಲಿ ಯಾವುದೇ ಅನುಮಾನವಿಲ್ಲದಂತೆ ಅಮೋಘ ಜಯ ಸಿಗಲಿದೆ ಎಂದರು.
    ಮಂಡ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಈಗಾಗಲೇ ಯೋಜನೆ ರೂಪಿಸಲಾಗಿದೆ. ಗುಣಮಟ್ಟದ ಶಿಕ್ಷಣಕ್ಕೆ ಒತ್ತು, ಮಂಡ್ಯ ನಗರದಲ್ಲಿ 24*7 ಕುಡಿಯುವ ನೀರಿಗೆ ಆದ್ಯತೆ, ಬಸರಾಳು ಗ್ರಾಮದಲ್ಲಿ ಕೈಗಾರಿಕಾ ಸ್ಥಾಪನೆ, ತಾವರೆಗೆರೆ ಮತ್ತು ಕೋಣನಹಳ್ಳಿ ಕೆರೆ ಅಭಿವೃದ್ಧಿ, ಕೆರಗೋಡು ಆಸ್ಪತ್ರೆಯ 100 ಹಾಸಿಗೆ ಉನ್ನತೀಕರಣಗೊಳಿಸುವುದು, ನಗರದ ಸ್ಲಂ ನಿವಾಸಿಗಳಿಗೆ ಹಕ್ಕುಪತ್ರ ನೀಡುವುದಾಗಿದೆ ಎಂದು ಭರವಸೆ ನೀಡಿದರು.
    ಕೆಪಿಸಿಸಿ ಮಹಿಳಾ ಘಟಕದ ಉಪಾಧ್ಯಕ್ಷೆ ಶುಭದಾಯಿನಿ, ಆರ್‌ಎಪಿಸಿಎಂಎಸ್ ನಿರ್ದೇಶಕ ಕೆ.ಸಿ.ರವೀಂದ್ರ ಇದ್ದರು.
    ಇದೇ ವೇಳೆ ಜೆಡಿಎಸ್‌ನ ಮಹೇಶ್‌ಕೃಷ್ಣ, ಅನಂತಪದ್ಮನಾಭ, ನಾಗರತ್ನ ಹಾಗೂ ಬಿಜೆಪಿಯ ಇಂದಿರಾ ಸತೀಶ್ ಬಾಬು ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts