More

    ಉಪಚುನಾವಣೆ ಸೋಲಿನ ಬಳಿಕ ಕುಸುಮಾ ಮೊದಲ ಪ್ರತಿಕ್ರಿಯೆ ಹೀಗಿದೆ…

    ಬೆಂಗಳೂರು: ರಾಜರಾಜೇಶ್ವರಿ ನಗರ ಉಪಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದಂತೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್​​ ಅಭ್ಯರ್ಥಿ ಕುಸುಮಾ, ಜನರು ಕೊಟ್ಟಿರುವ ತೀರ್ಪನ್ನು ತಲೆಬಾಗಿ ಸ್ವೀಕರಿಸುತ್ತೇನೆಂದು ತಿಳಿಸಿದ್ದಾರೆ.

    ಫೇಸ್​ಬುಕ್​ ಮೂಲಕ ಜನರಿಗೆ ಸಂದೇಶ ರವಾನಿಸಿರುವ ಕುಸುಮಾ, ಕಾಂಗ್ರೆಸ್​ ಪಕ್ಷದ ಮೂಲಕ ನನ್ನನ್ನು ಬೆಂಬಲಿಸಿದ ನಿಮಗೆ ಹೃದಯಪೂರ್ವಕ ಧನ್ಯವಾದಗಳು. ಮತಯಾಚನೆಗೆ ಮನೆಬಾಗಿಲಿಗೆ ಬಂದಾನ ಮನೆಮಗಳಂತೆ ಬರಮಾಡಿಕೊಂಡು ಕುಂಕುಮ ಇಟ್ಟು, ಹೂ ಮುಡಿಸಿ, ಉಡಿ ತುಂಬಿ ನೀವು ತೋರಿದ ಪ್ರೀತಿಗೆ ಋಣಿಯಾಗಿದ್ದೇನೆ.

    ಇದನ್ನೂ ಓದಿ: ಉಪಚುನಾವಣೆಯಲ್ಲಿ ಅಧಿಕಾರ ಮತ್ತು ಹಣ ಕೆಲಸ ಮಾಡಿದೆ: ಮಾಜಿ ಸಿಎಂ ಸಿದ್ದರಾಮಯ್ಯ

    ನಮ್ಮ ರಾಜರಾಜೇಶ್ವರಿ ನಗರ ಕ್ಷೇತ್ರ ಎಂದೆಂದಿಗೂ ನನ್ನ ಕರ್ಮಭೂಮಿ. ಎಂದಿನಂತೆ ನಿಮ್ಮೊಂದಿಗಿದ್ದು, ನನ್ನ ಸಮಾಜ ಸೇವಾ ಕಾರ್ಯಗಳನ್ನು ಮುಂದುವರಿಸುವ ಮೂಲಕ ನೊಂದವರ ದನಿಯಾಗುತ್ತೇನೆ ಎಂದು ತಿಳಿಸಿದ್ದಾರೆ.

    ಕುಸುಮಾಗೆ ಶುರುವಾಯ್ತಾ ಸೋಲಿನ ಭಯ?: ನಿನ್ನೆ ಹೇಳಿದ ಮಾತಿನಂತೆ ನಡೆಯದ ಕಾಂಗ್ರೆಸ್​ ಅಭ್ಯರ್ಥಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts