ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿರುದ್ಧ ಪ್ರದೇಶ ಕಾಂಗ್ರೆಸ್ ಸಮಿತಿ ದೂರು ನೀಡಿದೆ. ಜತೆಗೆ ಮೋದಿಯವರನ್ನು ಚುನಾವಣಾ ಪ್ರಚಾರದಿಂದ ಕೈ ಬಿಡಬೇಕು ಎಂದು ಆಗ್ರಹಿಸಿದೆ.
ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ಮೋದಿ, ಒಬಿಸಿ ಕೋಟಾಕ್ಕೆ ಮುಸ್ಲಿಮರನ್ನು ಸೇರಿಸುವ ಮೂಲಕ ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕಿದ್ದ ದೊಡ್ಡ ಪಾಲನ್ನು ಕಿತ್ತುಕೊಳ್ಳಲಾಗಿದೆ. ಈ ವಿಧಾನವನ್ನು ದೇಶದಾದ್ಯಂತ ಜಾರಿಗೆ ತರಲು ಕಾಂಗ್ರೆಸ್ ಯೋಜಿಸಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದರು.
ಕಾಂಗ್ರೆಸ್ ವಿರುದ್ಧ ದುರುದ್ದೇಶ ಪೂರ್ವಕವಾಗಿ ಮೋದಿ ಆರೋಪಿಸಿದ್ದಾರೆ, ಇದು ಚುನಾವಣೆ ನೀತಿ ಸಂಹಿತೆಗೆ ವಿರುದ್ಧವಾಗಿದೆ. ಹೀಗಾಗಿ ಅವರ ಮೇಲೆ ಕ್ರಮಕೈಗೊಳ್ಳುವಂತೆ ಗುರುವಾರ ಚುನಾವಣೆ ಆಯೋಗಕ್ಕೆ ನೀಡಿದ ದೂರಿನಲ್ಲಿ ಒತ್ತಾಯಿಸಲಾಗಿದೆ.