ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಹೆಚ್ಚಾಗುತ್ತಿರುವ ಕೋವಿಡ್ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಲಾಕ್ಡೌನ್ ಅನಿವಾರ್ಯ ಎಂದು ಪ್ರತಿಪಾದಿಸುತ್ತಿರುವ ಕಾಂಗ್ರೆಸ್, ದುಡಿದು ತಿನ್ನೋರಿಗೆ ಹಣ ಮತ್ತು ಆಹಾರ ಕಿಟ್ ಕೊಟ್ಟು ಮತ್ತೊಮ್ಮೆ ಲಾಕ್ಡೌನ್ ಜಾರಿ ಮಾಡಬೇಕು ಎಂದು ಆಗ್ರಹಿಸಿದೆ.
ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಕರೊನಾ ರೋಗಿಗಳ ಶುಲ್ಕವನ್ನು ಸರ್ಕಾರವೇ ಭರಿಸಬೇಕು. ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡುತ್ತಿರುವ ಕರೊನಾ ವಾರಿಯರ್ಸ್ಗೆ ನೈತಿಕ ಬಲ ತುಂಬಬೇಕು ಎಂದು ಸರ್ಕಾರವನ್ನು ಆಗ್ರಹಿಸುತ್ತಿರುವ ಕಾಂಗ್ರೆಸ್, ಕರೊನಾ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಕೊಡಬೇಕು ಎಂದಿದೆ. ಇದನ್ನೂ ಓದಿರಿ ಕೋವಿಡ್ನಿಂದ ದೇಶದಲ್ಲಿ ಲಕ್ಷಾಂತರ ಜನರೇನೂ ಸತ್ತಿಲ್ಲ… ಲಾಕ್ಡೌನ್ ಬೇಡ: ಪ್ರತಾಪ್ಸಿಂಹ
ಲಾಕ್ಡೌನ್ಗಿಂತ ರಾಜ್ಯದ ಆರ್ಥಿಕ ಪರಿಸ್ಥಿತಿ ಚೇತರಿಕೆಯೇ ಮುಖ್ಯ, ಮತ್ತೊಮ್ಮೆ ಲಾಕ್ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದಿರುವ ಸಿಎಂ ಯಡಿಯೂರಪ್ಪ ಅವರು ಕಾಂಗ್ರೆಸ್ ಒತ್ತಡಕ್ಕೆ ಮಣಿದು ಬಡಜನರ ಕೈಗೆ ಹಣ ಕೊಟ್ಟು ಲಾಕ್ಡೌನ್ ಜಾರಿ ಮಾಡಲಿದ್ದಾರೆಯೇ? ಕಾದು ನೋಡಬೇಕು.
ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಸರ್ಕಾರ ಲಾಕ್ಡೌನ್ ಸಡಿಸಲಗೊಳಿಸಿದ್ದು ತಪ್ಪು ಎನ್ನುತ್ತಿರುವ ಕಾಂಗ್ರೆಸ್ ಮುಖಂಡರು, ಜನರಿಗೆ ಅಗತ್ಯ ವಸ್ತು ಕೊಟ್ಟು ಮತ್ತೊಮ್ಮೆ ಲಾಕ್ಡೌನ್ ಮಾಡಿ ಎಂದು ಒತ್ತಾಯಿಸಿದ್ದಾರೆ.