ಬೆಂಗಳೂರು: ಏಕರೂಪ ನಾಗರಿಕ ಸಂಹಿತೆ ಜಾರಿ ಆಗಬೇಕು ಎನ್ನುವುದು ಅನೇಕ ಸಮಯದಿಂದ ಕೇಳಿ ಬರುತ್ತಿರುವ ಕೂಗು. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಈ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಲು ಹಿಂಜರಿದಿದೆ. ಕಾಂಗ್ರೆಸ್ನ ಈ ನಡೆಯನ್ನು ಎಚ್ಚರಿಕೆಯ ಹೆಜ್ಜೆ ಎಂದೇ ಕರೆಯಬಹುದು. ‘ಇದೊಂದು ಸೂಕ್ಷ್ಮ ವಿಚಾರ. ನಾಯಕರ ಜೊತೆ ಚರ್ಚೆ ನಡೆಸುತ್ತೇವೆ. ಕಾಂಗ್ರೆಸ್ನ ಹೇಳಿಕೆಯಲ್ಲಿ ಯಾವುದೇ ಗೊಂದಲ ಆಗಬಾರದು. ಕಾಂಗ್ರೆಸ್ ನಿರ್ಣಯ ಒಂದೇ ಆಗಿರಬೇಕು’ ಎಂದು ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಒಟ್ಟಿನಲ್ಲಿ ಹೈಕಮಾಂಡ್ ಸೂಚನೆ ಪಡೆದು ನಂತರ ಮಾತನಾಡಲು ಕಾಂಗ್ರೆಸ್ ಚಿಂತನೆ ನಡೆಸಿದೆ.
‘ಏಕರೂಪ ನಾಗರಿಕ ಕಾಯ್ದೆ ಬಗ್ಗೆ ಈಗ ಡಿಬೇಟ್ ಬೇಡ. ನಾವು ಖಂಡಿತವಾಗಿ ಇದರ ಬಗ್ಗೆ ಮಾತನಾಡುತ್ತೇವೆ. ಇವತ್ತು ಎಲ್ಲ ಮಿಕ್ಸ್ ಮಾಡೋದು ಬೇಡ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಈ ಹಿಂದೆ ಹಿಜಾಬ್ ವಿಚಾರವಾಗಿ ಕಾಂಗ್ರೆಸ್ ದ್ವಂದ್ವ ನಿಲುವು ತೆಗೆದುಕೊಂಡಿತ್ತು. ಇದರಿಂದ ಕಾಂಗ್ರೆಸ್ಗೆ ಸಾಕಷ್ಟು ಮುಜುಗರವೂ ಆಗಿತ್ತು. ಜೊತೆಗೆ ವಿವಾದಕ್ಕೂ ಕಾರಣವಾಗಿತ್ತು. ಹಾಗಾಗಿ‘ ಈ ಬಾರಿ ಕಾಂಗ್ರೆಸ್ ನಾಯಕರು ಎಚ್ಚರಿಕೆಯ ಹೆಜ್ಜೆ ಇಟ್ಟಿದ್ದಾರೆ,