ನವದೆಹಲಿ: ರಾಜ್ಯಸಭೆಗೆ ನಡೆದ ಈ ಸಲದ ಚುನಾವಣೆಯಲ್ಲಿ ಕೆಲವೆಡೆ ಅಡ್ಡ ಮತದಾನದ ಚಲಾವಣೆ ಆಗಿದ್ದು, ಅದೇ ಈಗ ಶಾಸಕರೊಬ್ಬರಿಗೆ ಕುತ್ತಾಗಿದ್ದು, ಅವರನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಕಾಂಗ್ರೆಸ್ ಈ ಮೂಲಕ ಅಡ್ಡ ಮತದಾನದ ವಿರುದ್ಧ ದಿಟ್ಟ ನಿರ್ಧಾರ ಕೈಗೊಂಡಿದೆ.
ಹರಿಯಾಣದ ಅದಂಪುರ ಕ್ಷೇತ್ರದ ಶಾಸಕ ಕುಲದೀಪ್ ಬಿಷ್ಣೊಯ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ವಿಶೇಷ ಆಹ್ವಾನಿತ ಸೇರಿದಂತೆ ಪಕ್ಷದ ಎಲ್ಲ ಸ್ಥಾನಗಳಿಂದಲೂ ಉಚ್ಚಾಟನೆ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ.
ಹರಿಯಾಣದಲ್ಲಿ ರಾಜ್ಯಸಭೆಯ ಎರಡು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯ ಕೃಷ್ಣನ್ ಪನ್ವಾರ್ ಜಯ ಗಳಿಸಿದ್ದರು. ಈ ಕುರಿತು ಮಾಹಿತಿ ನೀಡುವಾಗ ಅಲ್ಲಿನ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅಡ್ಡ ಮತದಾನದ ಕುರಿತು ಪ್ರಸ್ತಾಪಿಸಿದ್ದರು. ಕುಲದೀಪ್ ಆತ್ಮಸಾಕ್ಷಿ ಪ್ರಕಾರ ಬಿಜೆಪಿಗೆ ಮತ ಚಲಾಯಿಸಿದ್ದು, ಕಾಂಗ್ರೆಸ್ನ ಅಜಯ್ ಮಾಕೆನ್ ಅವರಿಗೆ ವೋಟ್ ಮಾಡಿರಲಿಲ್ಲ ಎಂದು ಖಟ್ಟರ್ ಬಹಿರಂಗಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಕುಲದೀಪ್ ಪಕ್ಷದಿಂದ ಉಚ್ಚಾಟನೆಗೊಂಡಿದ್ದಾರೆ.
ಮಾರ್ಕ್ ಜುಕರ್ಬರ್ಗ್ ವಿದಾಯ ಹೇಳಿದ ಬೆನ್ನಿಗೇ ಮೆಟಾ ಸಿಒಒ ವಿರುದ್ಧ ತನಿಖೆ ಶುರು!; ಆರೋಪಗಳೇನು?
ವಾಟ್ಸ್ಆ್ಯಪ್ ಬಳಕೆದಾರರಿಗೆ ಸಂತಸದ ಸಂಗತಿ; ಟೆಲಿಗ್ರಾಂ ಆ್ಯಪ್ಗೆ ಪೈಪೋಟಿಯಂತೆ ಮತ್ತೊಂದು ಅಪ್ಡೇಟ್..