ಅಡ್ಡ ಮತದಾನ ಮಾಡಿದ ಶಾಸಕನನ್ನು ಪಕ್ಷದಿಂದ ಉಚ್ಚಾಟಿಸಿದ ಕಾಂಗ್ರೆಸ್​

ನವದೆಹಲಿ: ರಾಜ್ಯಸಭೆಗೆ ನಡೆದ ಈ ಸಲದ ಚುನಾವಣೆಯಲ್ಲಿ ಕೆಲವೆಡೆ ಅಡ್ಡ ಮತದಾನದ ಚಲಾವಣೆ ಆಗಿದ್ದು, ಅದೇ ಈಗ ಶಾಸಕರೊಬ್ಬರಿಗೆ ಕುತ್ತಾಗಿದ್ದು, ಅವರನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಕಾಂಗ್ರೆಸ್​ ಈ ಮೂಲಕ ಅಡ್ಡ ಮತದಾನದ ವಿರುದ್ಧ ದಿಟ್ಟ ನಿರ್ಧಾರ ಕೈಗೊಂಡಿದೆ. ಹರಿಯಾಣದ ಅದಂಪುರ ಕ್ಷೇತ್ರದ ಶಾಸಕ ಕುಲದೀಪ್ ಬಿಷ್ಣೊಯ್​ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕಾಂಗ್ರೆಸ್​ ಕಾರ್ಯಕಾರಿ ಸಮಿತಿಯ ವಿಶೇಷ ಆಹ್ವಾನಿತ ಸೇರಿದಂತೆ ಪಕ್ಷದ ಎಲ್ಲ ಸ್ಥಾನಗಳಿಂದಲೂ ಉಚ್ಚಾಟನೆ ಮಾಡಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ತಿಳಿಸಿದ್ದಾರೆ. … Continue reading ಅಡ್ಡ ಮತದಾನ ಮಾಡಿದ ಶಾಸಕನನ್ನು ಪಕ್ಷದಿಂದ ಉಚ್ಚಾಟಿಸಿದ ಕಾಂಗ್ರೆಸ್​