ಬೆಂಗಳೂರು: ಚುನಾವಣೆಗೆ ಮುನ್ನವೇ ಗೆದ್ದು ಅಧಿಕಾರಕ್ಕೆ ಬಂದೇ ಬಿಟ್ಟೆವು ಎಂಬಂತೆ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಕಚ್ಚಾಟ ಶುರುವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲೇವಡಿ ಮಾಡಿದರು.
ಯಲಹಂಕ ಶಾಸಕ, ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರಿಗೆ ಜನ್ಮ ದಿನದ ಶುಭ ಹಾರೈಸಿದ ನಂತರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಬಿಡುವುದಿಲ್ಲ. ಅವರ ಆಸೆ ಫಲಿಸುವುದಿಲ್ಲ ಎಂದರು.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನ ಗೆಲ್ಲುವುದು ನಿಶ್ಚಿತ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಭಿವೃದ್ಧಿ ಕೆಲಸಗಳು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ. ಜನರಿಗೆ ತಿಳಿಸಲು ಸಮಾವೇಶಗಳನ್ನು ಆಯೋಜಿಸುತ್ತಿದ್ದು, ಸಂಘಟನೆ ಬಲಪಡಿಸಲು ಪ್ರವಾಸ ಕೈಗೊಳ್ಳುತ್ತೇವೆ ಎಂದು ಬಿಎಸ್ ವೈ ಹೇಳಿದರು.
ಹೊಲದಲ್ಲಿ ಕೆಲಸ ಮಾಡುತ್ತಿದ್ದವರ ಬಳಿಯೇ ಬಿತ್ತು ವಿಂಡ್ ಪವರ್ ಫ್ಯಾನ್: ತಪ್ಪಿತು ಭಾರೀ ದುರಂತ!
ನನ್ನ ಜೀವನದಲ್ಲಿ ಶೇ.10ರಷ್ಟು ನೆಮ್ಮದಿ ಉಳಿಯಲಿಲ್ಲ: ಅಚ್ಚರಿ ಹೇಳಿಕೆ ನೀಡಿದ ಸೂಪರ್ ಸ್ಟಾರ್ ರಜನಿಕಾಂತ್!