ಬೆಂಗಳೂರು: ಇಂದು ಪ್ರಧಾನಿ ಮೋದಿ ಬೆಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದು ಅನೇಕ ಅಭಿಮಾನಿಗಳನ್ನು ತಲುಪಿದ್ದಾರೆ. ಈ ನಡುವೆಯೇ ಕಾಂಗ್ರೆಸ್ ಪ್ರಧಾನಿ ಹಾಗೂ ಮಣಿಕಂಠ ರಾಥೋಡ್ ವಿರುದ್ಧ ದೂರು ದಾಖಲಿಸಿದೆ.
ಕಾಂಗ್ರೆಸ್ ಲೋಕಸಭಾ ಮಾಜಿ ಸ್ಪೀಕರ್ ಮೀರಾ ಕುಮಾರ್ ನೇತೃತ್ವದ ನಿಯೋಗದಿಂದ ಹೈಗ್ರೌಂಡ್ಸ್ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಭಯೋತ್ಪಾದನೆಗೆ ಕಾಂಗ್ರೆಸ್ ಬೆಂಬಲ ನೀಡುತ್ತೆ ಎಂದು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ದೂರನ್ನು ದಾಖಲಿಸಲಾಗಿದೆ.
ಅವರೊಂದಿಗೆ ಮಣಿಕಂಠ ರಾಥೋಡ್ ವಿರುದ್ಧವೂ ದೂರನ್ನು ದಾಖಲಿಸಲಾಗಿದ್ದು ಅವರು, ಖರ್ಗೆ ಮುಗಿಸುವ ಬಗ್ಗೆ ಮಾತನಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ಇವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಪೊಲೀಸ್ ಠಾಣೆಗೆ ತೆರಳಿರುವ ಕಾಂಗ್ರೆಸ್ ನಿಯೋಗ ದೂರು ದಾಖಲಿಸಿದೆ. ನಿಯೋಗದಲ್ಲಿ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಪವನ್ ಖೇರಾ,ರಮೇಶ್ ಬಾಬು, ಗೌರವ್ ವಲ್ಲಭ್ ಸೇರಿದಂತೆ ಹಲವರು ಭಾಗಿಯಾಗಿದ್ದರು