More

    ಬರ ನಿರ್ವಹಣೆಯಲ್ಲಿ ಕಾಂಗ್ರೆಸ್ ಸರ್ಕಾರ ವಿಫಲ

    ಶಿವಮೊಗ್ಗ: ಬರ ನಿರ್ವಹಣೆ, ರೈತರಿಗೆ ಪರಿಹಾರ ವಿತರಣೆ ಸೇರಿದಂತೆ ರಾಜ್ಯದಲ್ಲಿ ತಲೆದೂರಿರುವ ಹತ್ತಾರು ಸಂಕಷ್ಟಗಳನ್ನು ನಿರ್ವಹಿಸುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಎಸ್.ಎಸ್.ಜ್ಯೋತಿಪ್ರಕಾಶ್ ಆರೋಪಿಸಿದರು.

    ವ್ಯಾಪಾರಸ್ಥರ ವಹಿವಾಟು ಕುಸಿತಗೊಂಡಿದೆ. ಅಭಿವೃದ್ಧಿಗೆ ಹಣ ನೀಡುತ್ತಿಲ್ಲ. ಗ್ಯಾರೆಂಟಿಗೆ ಹೆಚ್ಚಿನ ಹಣ ವಿನಿಯೋಗ ಮಾಡುತ್ತಿದ್ದು ರಾಜ್ಯ ಸರ್ಕಾರದ ಈ ನೀತಿಯಿಂದಾಗಿ ರೈತರ ಆರ್ಥಿಕ ಸ್ಥಿತಿ ಮೇಲೆ ದುಷ್ಪರಿಣಾಮ ಉಂಟಾಗಿದೆ. ಸರ್ಕಾರ ಮುಂದಿನ ದಿನಗಳಲ್ಲಿ ಇರಬಾರದು ಎಂದು ಜನ ಶಾಪ ಹಾಕುತ್ತಿದ್ದಾರೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರೈತ ನಿಧಿ, ರೈತ ಸಮ್ಮಾನ್ ಯೋಜನೆಗೆ ಕಾಂಗ್ರೆಸ್ ಕತ್ತರಿ ಹಾಕಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ 39 ಸಾವಿರ ರೈತರಿಗೆ 396 ಸಾವಿರ ಕೋಟಿ ರೂ. ಅನುದಾನವನ್ನು ಕೇಂದ್ರ ಸರ್ಕಾರ ನೀಡಿದೆ. ಯೂರಿಯಾ ಗೊಬ್ಬರಕ್ಕೆ ನೀಮ್ ಕೋಟಿಂಗ್ ಮಾಡಿಕೊಡಲಾಗುತ್ತಿದೆ. ಫಸಲ್ ಬಿಮಾ ಯೋಜನೆಯ ಫಲಾನುಭವಿಗಳಿಗೆ ಉತ್ತಮ ಅನುದಾನ ಸಿಗುತ್ತಿದೆ. ಗ್ರಾಮ ಪಂಚಾಯತಿ 19 ಲಕ್ಷ ಗ್ರಾಮೀಣ ಕುಟುಂಬದಲ್ಲಿ ಬಹುತೇಕ ಮನೆಗಳಿಗೆ ಮನೆ ಮನೆಗಳಿಗೆ ಜಲ ಜೀವನ್ ಯೋಜನೆ ಯಶಸ್ವಿ ನೀಡಲಾಗಿದೆ. ಪ್ರತಿಯೊಂದು ವ್ಯವಸ್ಥೆಯಲ್ಲೂ ಹಣ ಹೆಚ್ಚಿಸಲಾಗಿದೆ ಎಂದು ಹೇಳಿದರು.
    ಮಾಜಿ ಎಂಎಲ್‌ಸಿಗಳಾದ ಆರ್.ಕೆ.ಸಿದ್ದರಾಮಣ್ಣ, ಎಂ.ಬಿ.ಭಾನುಪ್ರಕಾಶ್, ವಿಭಾಗ ಪ್ರಭಾರಿ ಗಿರೀಶ್ ಪಟೇಲ್, ಪ್ರಮುಖರಾದ ಕೆ.ವಿ.ಅಣ್ಣಪ್ಪ, ವಿನ್ಸೆಂಟ್ ರೋಡ್ರಿಗಸ್, ಚಂದ್ರಶೇಖರ್ ಸುದ್ದಿಗೋಷ್ಠಿಯಲ್ಲಿದ್ದರು.

    ಭದ್ರಾವತಿಯಲ್ಲಿ ಸೋತಿದ್ದಕೆ ರಾಜ್ಯಸಭಾ ಸ್ಥಾನ
    ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಅವರು ನಾನು ಕಷ್ಟದದಿನಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಿದ್ದೇನೆ. ಭದ್ರಾವತಿಗೆ ಕರೆತಂದು ರಾಜಕೀಯವಾಗಿ ಬಲಿಕೊಡಲಾಯಿತೆಂದು ಆರೋಪಿಸಿದ್ದಾರೆ. ಆದರೆ ಅದು ಸತ್ಯಕ್ಕೆದೂರವಾದುದ್ದು. ಭದ್ರಾವತಿಯಲ್ಲಿ ನಿಂತಿದ್ದಕ್ಕೆ ಅವರು ರಾಜ್ಯಸಭಾ ಸ್ಥಾನ, ವಿಧಾನ ಸಭಾ ಸ್ಥಾನ ಪಡೆದಿದ್ದಾರೆ ಎಂದು ಜ್ಯೋತಿಪ್ರಕಾಶ್ ಹೇಳಿದರು. ಆಯನೂರು ಮಂಜುನಾಥ ಅವರಿಗೆ ಇರುವಷ್ಟೇ ರಾಜಕೀಯ ಜ್ಞಾನ ನನಗೂ ಇದೆ ಎಂದ ಅವರು, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರನ್ನು ಪಕ್ಷಕ್ಕೆ ಕರೆತರಲು ಯತ್ನಿಸಲಾಗಿತ್ತು. ಈಗ ಅದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts