ಬೆಂಗಳೂರು: ಕಳೆದ ಕೆಲ ದಿನಗಳಿಂದ ಕಾಂಗ್ರೆಸ್ ಸರ್ಕಾರಕ್ಕೆ ಗೊಂದಲದ ಗೂಡಾಗಿ ಪರಿಣಮಿಸಿದ್ದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಪಟ್ಟಿ ಗಣರಾಜ್ಯೋತ್ಸವದ ಪ್ರಯುಕ್ತ ಬಿಡುಗಡೆಯಾಗಿದೆ. 34 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಲಭಿಸಿದೆ.
ಬಿಡುಗಡೆ ಮಾಡಲಾಗಿರುವ ಪಟ್ಟಿಯಲ್ಲಿ ನಮೂದಿಸಲಾಗಿರುವ ಶಾಸಕರನ್ನು ನಿಗಮ/ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಆದೇಶ ಹೊರಡಿಸಿದ ದಿನಾಂಕದಿಂದ ಎರಡು ವರ್ಷಗಳ ಅವಧಿಗೆ ನೇಮಿಸಿ ಆದೇಶಿಸಲಾಗಿದೆ.
ನೇಮಕಗೊಂಡ ಶಾಸಕರ ಹೆಸರು ಇಂತಿದೆ:
ರಾಜು ಕಾಗೆ: ಹುಬ್ಬಳ್ಳಿ ಸಾರಿಗೆ ನಿಗಮ (ವಾಯವ್ಯ ಸಾರಿಗೆ ನಿಗಮ)
ಹೆಚ್.ವೈ.ಮೇಟಿ: ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ
ಎಸ್.ಆರ್.ಶ್ರೀನಿವಾಸ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ
ಬಸವರಾಜ ನೀಲಪ್ಪ ಶಿವಣ್ಣನವರ್: ಅರಣ್ಯ ಅಭಿವೃದ್ಧಿ ನಿಗಮ
ಬಿ.ಜಿ.ಗೋವಿಂದಪ್ಪ: ಆಹಾರ ಮತ್ತು ನಾಗರಿಕ ಸರಬರಾಜು ನಿಗಮ
ಹೆಚ್.ಸಿ.ಬಾಲಕೃಷ್ಣ: ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ
ಜಿ.ಎಸ್.ಪಾಟೀಲ್: ಖನಿಜ ಅಭಿವೃದ್ಧಿ ನಿಗಮ ನಿಯಮಿತ
ಎನ್.ಎ.ಹ್ಯಾರಿಸ್: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಕೌಜಲಗಿ ಮಹಾಂತೇಶ್ ಶಿವಾನಂದ: ಹಣಕಾಸು ಸಂಸ್ಥೆ
ಸಿ.ಪುಟ್ಟರಂಗಶೆಟ್ಟಿ: ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್
ಬೀಳಗಿ ಶಾಸಕ ಜೆ.ಟಿ.ಪಾಟೀಲ್: ಹಟ್ಟಿ ಚಿನ್ನದ ಗಣಿ
ರಾಜಾ ವೆಂಕಟಪ್ಪ ನಾಯಕ: ಕರ್ನಾಟಕ ರಾಜ್ಯ ಉಗ್ರಾಣ ನಿಗಮ
ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ: ಲ್ಯಾಂಡ್ ಆರ್ಮಿ
ಕೆ.ಎಂ.ಶಿವಲಿಂಗೇಗೌಡ: ಕರ್ನಾಟಕ ಗೃಹ ಮಂಡಳಿ
ಅಬ್ಬಯ್ಯ ಪ್ರಸಾದ್: ಕರ್ನಾಟಕ ರಾಜ್ಯ ಕೊಳಚೆ ಅಭಿವೃದ್ಧಿ ಮಂಡಳಿ
ಬೇಳೂರು ಗೋಪಾಲಕೃಷ್ಣ: ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ
ಎಸ್.ಎನ್.ನಾರಾಯಣಸ್ವಾಮಿ: ಕೆಯುಡಿಐಸಿ ಮತ್ತು ಎಫ್ಸಿ
ಪಿ.ಎಂ.ನರೇಂದ್ರಸ್ವಾಮಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ
ಟಿ.ರಘುಮೂರ್ತಿ: ಕರ್ನಾಟಕ ರಾಜ್ಯ ಕೈಗಾರಿಕೆಗಳ ಮಂಡಳಿ
ರಮೇಶ್ ಬಾಬು ಬಂಡಿಸಿದ್ದೇಗೌಡ: ಚೆಸ್ಕಾಂ
ಬಿ.ಶಿವಣ್ಣ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ
ಎಸ್.ಎನ್.ಸುಬ್ಬಾರೆಡ್ಡಿ: ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ
ವಿನಯ ಕುಲಕರ್ಣಿ: ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
ಅನಿಲ್ ಚಿಕ್ಕಮಾದು: ಜಂಗಲ್ ಲಾಡ್ಜಸ್
ಬಸನಗೌಡ ದದ್ದಲ್: ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ
ಖನೀಜ್ ಫಾತಿಮಾ: ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ
ವಿಜಯಾನಂದ ಕಾಶಪ್ಪನರ್: ಕರ್ನಾಟಕ ಕ್ರೀಡಾ ಪ್ರಾಧಿಕಾರ
ಶ್ರೀನಿವಾಸ ಮಾನೆ: ಡಿಸಿಎಂ ರಾಜಕೀಯ ಸಲಹೆಗಾರ
ಟಿ.ಡಿ.ರಾಜೇಗೌಡ: ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ
ಎಂ.ರೂಪಕಲಾ: ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ
ಸತೀಶ್ ಸೈಲ್: ಕರ್ನಾಟಕ ಮಾರ್ಕೇಟಿಂಗ್ ಕನ್ಸಲ್ಟೆಂಟ್ ಅಂಡ್ ಏಜೆನ್ಸಿಸ್
ಶರತ್ ಬಚ್ಚೇಗೌಡ: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ
ಜಿ.ಎಂ. ಗಣೇಶ್: ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ
ಬಸವನಗೌಡ ತುರುವಿಹಾಳ: ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ