More

    ಕಾಂಗ್ರೆಸ್ ಗ್ಯಾರಂಟಿಗಳಿಗೆ ವಾರಂಟಿಯಿಲ್ಲ

    ರಾಯಚೂರು: ಕಾಂಗ್ರೆಸ್ ನೀಡಿರುವ ಗ್ಯಾರಂಟಿಗಳಿಗೆ ವಾರಂಟಿಯೇ ಇಲ್ಲ. ಕಳೆದ 10 ವರ್ಷದಲ್ಲಿ ಪ್ರಧಾನಿ ಮೋದಿ ದೇಶಕ್ಕೆ ಮರ್ಯಾದೆ ತಂದು ಕೊಟ್ಟಿದ್ದಾರೆ. ಆದರೆ ಕಾಂಗ್ರೆಸ್‌ನವರು ದೇಶವನ್ನು ಮರಳಿ ಹಿಂದಕ್ಕೆ ತೆಗೆದುಕೊಂಡು ಹೋಗಲು ಪ್ರಯತ್ನಿಸುತ್ತಿದ್ದಾರೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದರು.
    ಸ್ಥಳೀಯ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಬಿಜೆಪಿ ಪ್ರಚಾರ ಸಭೆಯಲ್ಲಿ ಮಾತನಾಡಿ, 150 ವರ್ಷ ಬ್ರಿಟಿಷರ ಎದುರು ಹಾಗೂ 50 ವರ್ಷ ಅಮೆರಿಕಾ ಎದುರು ನಾವು ಕೈ ಕಟ್ಟಿಕೊಂಡು ನಿಂತಿದ್ದೇವೆ. ಮೋದಿ ಪ್ರಧಾನಿಯಾದ ಮೇಲೆ ದೇಶ ಅತಿ ವೇಗದಲ್ಲಿ ಆರ್ಥಿಕತೆಯತ್ತ ಸಾಗುತ್ತಿದ್ದು, ವಿಶ್ವದ ಗಮನ ಸೆಳೆಯುವಂತಾಗಿದೆ ಎಂದರು.
    ಸಂವಿಧಾನದ ಬಗ್ಗೆ ಮಾತನಾಡುವ ಹಕ್ಕು ಕಾಂಗ್ರೆಸ್‌ಗಿಲ್ಲ. ಸಂವಿಧಾನದ ರಕ್ಷಣೆಗಾಗಿ ಬಿಜೆಪಿ ಅಕಾರಕ್ಕೆ ಬಂದಿದೆ. ಒಂದು ದೇಶ ಒಂದು ಚುನಾವಣೆ, ಏಕರೂಪ ನಾಗರಿಕತೆಯನ್ನು ತರುತ್ತೇವೆ. ಮೋದಿ ಆಡಳಿತದಲ್ಲಿ 2027ಕ್ಕೆ ವಿಶ್ವದ ಆರ್ಥಿಕತೆಯಲ್ಲಿ 3ನೇ ಸ್ಥಾನಕ್ಕೆ ದೇಶವನ್ನು ತರುತ್ತೇವೆ.
    ಬಿಜೆಪಿ ಎಲ್ಲ ಸಮುದಾಯದವರನ್ನು ಸಮಾನವಾಗಿ ನೋಡುತ್ತದೆ. ಮುಸ್ಲಿ ಸಮಾಜದ ಅಬ್ದುಲ್ ಕಲಾಂ, ಪರಿಶಿಷ್ಟ ಸಮುದಾಯದ ರಮಾನಾಥ ಕೋವಿಂದ್, ಬುಡಕಟ್ಟು ಸಮುದಾಯದ ದ್ರೌಪದಿ ಮುರ್ಮುರನ್ನು ರಾಷ್ಟ್ರಪತಿ ಮಾಡಿದೆ ಎಂದು ಅಣ್ಣಾಮಲೈ ಹೇಳಿದರು.
    ಇದಕ್ಕೂ ಮುಂಚೆ ನಗರದ ಗಂಜ್ ವೃತ್ತದಿಂದ ಪ್ರಮುಖ ಬೀದಿಗಳ ಮೂಲಕ ಗಾಂ ವೃತ್ತದವರೆಗೆ ರೋಡ್‌ಶೋ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು, ಶಾಸಕ ಡಾ.ಶಿವರಾಜ ಪಾಟೀಲ್, ಮಾಜಿ ಎಂಎಲ್ಸಿ ಎನ್.ಶಂಕ್ರಪ್ಪ, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ವಿರುಪಾಕ್ಷಿ, ಪದಾಕಾರಿಗಳಾದ ಲಲಿತಾ ಕಡಗೋಲ, ರಾಘವೇಂದ್ರ ಉಟ್ಕೂರು, ಶಂಕರರೆಡ್ಡಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts