BJP ಅವಧಿಯಲ್ಲಿ ದೇಶಕ್ಕೆ ಮಾದರಿಯಾಗಿದ್ದ ಆರೋಗ್ಯ ಇಲಾಖೆಯನ್ನು ಕಾಂಗ್ರೆಸ್​ ಕಡೆಗಣಿಸಿದೆ; ಬಿ.ವೈ.ವಿಜಯೇಂದ್ರ

blank

ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವುಗಳ ಬೆನ್ನಲ್ಲೇ ಇದೀಗ ಬೆಳಗಾವಿ ಜಿಲ್ಲೆಯಲ್ಲಿ ಕಳೆದ 6 ತಿಂಗಳಲ್ಲೇ 29 ಬಾಣಂತಿಯರು ಹಾಗೂ 1 ವರ್ಷದಲ್ಲಿ 322 ನವಜಾತ ಶಿಶುಗಳು ಮೃತಪಟ್ಟಿರುವ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿರುವುದು ದುಃಖ ತರಿಸಿದೆ ಎಂದು ಬಿಜೆಪಿ(BJP) ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.

ಈ ಕುರಿತು ತಮ್ಮ ಎಕ್ಸ್​​ ಖಾತೆಯಲ್ಲಿ ಪೋಸ್ಟ್​ ಮಾಡಿರುವ ಅವರು, ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ದೇಶಕ್ಕೆ ಮಾದರಿಯಾಗಿದ್ದ ಆರೋಗ್ಯ ಇಲಾಖೆಯನ್ನು ಸಂಪೂರ್ಣ ಕಡೆಗಣಿಸಿರುವ ಕಾಂಗ್ರೆಸ್​ ಸರ್ಕಾರದ ಬೇಜವಾಬ್ದಾರಿ ದುರಾಡಳಿತದಲ್ಲಿ ಇಲಾಖೆಯ ಅಕ್ರಮ, ಭ್ರಷ್ಟಾಚಾರಗಳು ಲೋಕಾಯುಕ್ತ ದಾಳಿಯಿಂದ ಬಯಲಾಗುತ್ತಿವೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ನನ್ನ ನಾಯಿ ಪ್ರೀತಿಗಿಂತ ಯಾವುದೇ ಪ್ರೀತಿ ದೊಡ್ಡದಲ್ಲ! ನಾಗಚೈತನ್ಯ 2ನೇ ಮದ್ವೆ ಬೆನ್ನಲ್ಲೇ samantha ಪೋಸ್ಟ್​​ ವೈರಲ್

ನಿರಂತರವಾಗಿ ಬಡಕುಟುಂಬಗಳ ತಾಯಂದಿರು ಹಾಗೂ ಹಸುಗೂಸುಗಳ ಸಾವು ನೋವುಗಳಾಗುತ್ತಿದ್ದರೂ, ಸಾರ್ವಜನಿಕರು ಬಿದಿಗಿಳಿದು ಪ್ರತಿಭಟನೆ ನಡೆಸಿದರೂ ಎಚ್ಚೆತ್ತುಕೊಂಡು ಘಟನೆಯ ಕುರಿತು ಕಠಿಣ ಕ್ರಮ ಕೈಗೊಳ್ಳಲು ತಾತ್ಸಾರ ಧೋರಣೆ ತಾಳಿರುವ ಕಾಂಗ್ರೆಸ್ ಸರ್ಕಾರಕ್ಕೆ ಜನಸಾಮಾನ್ಯರು, ಬಡವರು ತಕ್ಕಪಾಠ ಕಲಿಸಲೇ ಬೇಕಿದೆ ಬಿಎಸ್​ವಿ ಆಗ್ರಹಿಸಿದ್ದಾರೆ.

ಇದನ್ನೂ ಓದಿ: 2 ಲಕ್ಷ ರೂ.ಗೆ ಮೂವರು ಗಂಡು ಮಕ್ಕಳ ಮಾರಾಟ ಮಾಡಿದ ಮಹಾತಾಯಿ ಅರೆಸ್ಟ್​​! | Mother

ಬೆಳಗಾವಿ ಜಿಲ್ಲಾಸ್ಪತ್ರೆಗೆ ಭೇಟಿ
ರಾಜ್ಯದಲ್ಲಿ ಬಾಣಂತಿಯರು ಮತ್ತು ಹಸುಗೂಸುಗಳ ಸರಣಿ ಸಾವಿನ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿಯೂ ಕಳೆದ 6 ತಿಂಗಳಲ್ಲೇ 29 ಬಾಣಂತಿಯರು ಹಾಗೂ 1 ವರ್ಷದಲ್ಲಿ 322 ನವಜಾತ ಶಿಶುಗಳು ಮೃತಪಟ್ಟಿದ್ದು, ಸೋಮವಾರ ಬೆಳಗಾವಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ವಸ್ತುಸ್ಥಿತಿಯ ಬಗ್ಗೆ ಮಾಹಿತಿ ಪಡೆದು ಸದ್ಯ ಚಿಕಿತ್ಸೆ ಪಡೆಯುತ್ತಿರುವ ಬಾಣಂತಿಯರ ಕ್ಷೇಮ ವಿಚಾರಿಸಲಾಯಿತು ಎಂದು ತಮ್ಮ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇದು ಹಿಂದುಸ್ತಾನ.. ಬಹು ಸಂಖ್ಯಾತರ ಇಚ್ಛೆಯಂತೆ ದೇಶ ನಡೆಯುತ್ತದೆ; ಹೈಕೋರ್ಟ್​ ನ್ಯಾಯಧೀಶ ವಿವಾದತ್ಮಾಕ ಹೇಳಿಕೆ | Hindustan

2 ಲಕ್ಷ ರೂ.ಗೆ ಮೂವರು ಗಂಡು ಮಕ್ಕಳ ಮಾರಾಟ ಮಾಡಿದ ಮಹಾತಾಯಿ ಅರೆಸ್ಟ್​​! | Mother

 

Share This Article

ನಿಮ್ಮ ಸ್ಮಾರ್ಟ್​ಫೋನ್​ ನಿಮ್ಮ ಫಿಟ್​ನೆಸ್​ ಕೋಚ್​… ಆಶ್ಚರ್ಯವಾಯಿತೇ? ಇಲ್ಲಿದೆ ಅಚ್ಚರಿ ಮಾಹಿತಿ… Smartphone

Smartphone : ಸ್ಮಾರ್ಟ್‌ಫೋನ್‌ಗಳ ಮೇಲಿನ ಅವಲಂಬನೆ ದಿನೇ ದಿನೇ ಹೆಚ್ಚಾಗುತ್ತಿದೆ. ಒಂದು ಅಧ್ಯಯನದ ಪ್ರಕಾರ, 2040ರ…

ಈ ದಿನಾಂಕಗಳಂದು ಜನಿಸಿದವರು ತಮ್ಮ ಬುದ್ಧಿವಂತಿಕೆಯಿಂದಾಗಿ ರಾಯಲ್​ ಲೈಫ್​ ನಡೆಸುತ್ತಾರೆ! Numerology

Numerology : ಜ್ಯೋತಿಷ್ಯದಲ್ಲಿ ಅನೇಕ ಬಗೆಗಳಿರುವುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಸಂಖ್ಯಾಶಾಸ್ತ್ರ ಮತ್ತು ಹಸ್ತಸಾಮುದ್ರಿಕ ಶಾಸ್ತ್ರವೂ…

ನೀವು ಬೆಳಿಗ್ಗೆ ತಿಂಡಿಯನ್ನು ತಡವಾಗಿ ತಿನ್ನುತ್ತೀರಾ? ಎಚ್ಚರ..ಈ ಕಾಯಿಲೆ ಬರೋದು ಪಕ್ಕಾ… breakfast

breakfast: ಬೆಳಗಿನ ಉಪಾಹಾರವು ದೇಹಕ್ಕೆ ಬಹಳ ಮುಖ್ಯ. ಯಾವುದೇ ಕಾರಣಕ್ಕೂ ಉಪಹಾರವನ್ನು ಬಿಡಬಾರದು. ತಡವಾಗಿ ತಿನ್ನುವುದು…