More

    ಕೋಟೆನಾಡಲ್ಲಿ ಕಾಂಗ್ರೆಸ್ ಬಾವುಟ ಹಾರಿಸುವುದು ಖಚಿತ


    ರಬಕವಿ-ಬನಹಟ್ಟಿ: ಕೋಟೆ ಮತದಾರರು ಪ್ರಜ್ಞಾವಂತರು. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ ಅವರನ್ನು ಗೆಲ್ಲಿಸುತ್ತಾರೆ ಎಂದು ಸಂಯುಕ್ತ ಸಹೋದರಿ ಸಂಪ್ರದಾ ಪಾಟೀಲ ಹೇಳಿದರು.

    ತಾಲೂಕಿನ ರಬಕವಿಯ ಕುಂಬಾರ ಓಣಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ ಪರ ಪ್ರಚಾರ ಕೈಗೊಂಡ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.

    ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ 5 ಗ್ಯಾರಂಟಿಗಳನ್ನು ನೀಡಿ ನುಡಿದಂತೆ ನಡೆದ ಸರ್ಕಾರವಾಗಿದೆ. ಆ ಗ್ಯಾರಂಟಿ ಆಧಾರದ ಮೇಲೆ ಮತದಾರರು ನಮಗೆ ಮತ ಕೊಟ್ಟು ಈ ಬಾರಿ ನಮಗೆ ಅವಕಾಶ ಮಾಡಿಕೊಡುತ್ತಾರೆಂಬ ಆತ್ಮವಿಶ್ವಾಸ ನಮಗಿದೆ. 20 ವರ್ಷ ಬಾಗಲಕೋಟೆ ಗದ್ದುಗೆ ಏರಿದ ಪಿ.ಸಿ.ಗದ್ದಿಗೌಡರ ಅವರಿಂದ ಅಭಿವೃದ್ಧಿ ಆಗಿಲ್ಲ. ಹಾಗಾಗಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ ಅವರನ್ನು ಗೆಲ್ಲಿಸಲಿದ್ದಾರೆ ಎಂದರು.

    ಎಲ್ಲ ಸಮುದಾಯದ ಚೌಕಟ್ಟಿನಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸಿದೆ. ನಮ್ಮ ಸರ್ಕಾರದ ಮೇಲೆ ಎಲ್ಲ ಸಮುದಾಯದವರು ವಿಶ್ವಾಸ ಇಟ್ಟಿದ್ದಾರೆ. ಆ ವಿಶ್ವಾಸಕ್ಕೆ ಕಾಂಗ್ರೆಸ್ ಪಕ್ಷ ಯಾವತ್ತೂ ಮೋಸ ಮಾಡಲ್ಲ. ಹಾಗಾಗಿ ಈ ಬಾರಿ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ ಗೆಲುವು ಖಚಿತ ಎಂದರು.

    ಕಾಂಗ್ರೆಸ್ ಪಕ್ಷದ ಮುಖಂಡರಾದ ಗೋದಾವರಿ ಕುಂಬಾರ, ಕವಿತಾ ಕೊಣ್ಣೂರ, ರೇಣುಕಾ ಮಡ್ಡಿಮನಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts