More

    ಗರ್ಭಿಣಿ ಮೇಲೆ ಹಲ್ಲೆ ಮಾಡಿದ ಕಾಂಗ್ರೆಸ್​ ಮುಖಂಡ; ಆಸ್ಪತ್ರೆಗೆ ದಾಖಲಾದ ಮಹಿಳೆ

    ಕೋಲಾರ: ಕಾಂಗ್ರೆಸ್​ ಮುಖಂಡ ತನ್ನ ಮೇಲೆ ಹಲ್ಲೆ ಮಾಡಿದ್ದಾನೆಂದು ಮಹಿಳೆಯೊಬ್ಬಳು ಆರೋಪಿಸಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗರ್ಭಿಣಿಯಾಗಿರುವ ಈ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

    ತಬ್ರೇಜ್​ ಎಂಬಾತನ ಪತ್ನಿ ಪವಿತ್ರಾ ಎಂಬಾಕೆಯೇ ದೂರು ನೀಡಿರುವ ಮಹಿಳೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ಎಂ.ಜಿ.ರಸ್ತೆಯಲ್ಲಿ ಈ ಪ್ರಕರಣ ನಡೆದಿದೆ. ಮನೆ ಮುಂದಿನ ರಸ್ತೆ ವಿಚಾರವಾಗಿ ನಡೆದ ಮಾತಿನ ಚಕಮಕಿ ಹಲ್ಲೆಯವರೆಗೂ ಹೋಗಿದೆ ಎನ್ನಲಾಗಿದೆ.

    ಪುರಸಭೆಯ ಮಾಜಿ ಸದಸ್ಯನೂ ಆಗಿರುವ ಸತ್ಯಪ್ಪ ಕಾಂಗ್ರೆಸ್​ ಮುಖಂಡನಾಗಿದ್ದು, ಗುಂಪು ಕಟ್ಟಿಕೊಂಡು ಹಲ್ಲೆ ನಡೆಸಿದ್ದಾನೆಂದು ಮಹಿಳೆ ಆರೋಪಿಸಿದ್ದಾಳೆ. ಈ ಕುರಿತು ಶ್ರೀನಿವಾಸಪುರ ಠಾಣೆಯಲ್ಲಿ ದೂರು ದಾಖಲಿಸಿರುವ ಮಹಿಳೆ, ಹಲ್ಲೆಯಿಂದ ಗಾಯಗೊಂಡಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ.

    ಎಂಬಿಬಿಎಸ್​ ವಿದ್ಯಾರ್ಥಿನಿ ಮೇಲೆ ಅಪ್ಪ-ಮಗನ ಅತ್ಯಾಚಾರ; ಇಸ್ಲಾಂ ಧರ್ಮಕ್ಕೆ ಮತಾಂತರಿಸಲೂ ಯತ್ನ

    ಇನ್ನೇನು ನಿಮ್ಮ ಕೆಲಸದ ಅವಧಿ ಮುಗಿಯುತ್ತೆ, ಮನೆಗೆ ಹೊರಡಿ: ಈ ಕಂಪನಿಯಲ್ಲಿ ಉದ್ಯೋಗಿಗಳಿಗೆ ಹೀಗೊಂದು ಎಚ್ಚರಿಕೆ!

    ತಮಿಳುನಾಡು ಬೇಟೆಗಾರರು ಹಾಗೂ ಕರ್ನಾಟಕ ಅರಣ್ಯ ಇಲಾಖೆಯವರ ಮಧ್ಯೆ ಗುಂಡಿನ ಚಕಮಕಿ; ಒಬ್ಬ ಸಾವು!

    ಕ್ರಿಕೆಟ್​ ವೇಳೆ ಕಿರಿಕ್​, ಚಾಕು ಇರಿತಕ್ಕೆ ಇಬ್ಬರ ಸಾವು: ಎರಡೂ ಊರುಗಳಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ

    ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಅಪ್ರಾಪ್ತ ವಯಸ್ಕಳ ಮುಖಕ್ಕೇ ಆ್ಯಸಿಡ್ ಎರಚಿದ!; ಆರೋಪಿ ಪರಾರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts