More

    ಕಾಂಗ್ರೆಸ್​ ನಾಯಕ, ಮಾಜಿ ಸಚಿವ ಡಿ.ಬಿ. ಇನಾಮದಾರ ವಿಧಿವಶ

    ಬೆಳಗಾವಿ: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ನಾಯಕ,​ ಮಾಜಿ ಸಚಿವ ಡಿ.ಬಿ. ಇನಾಮದಾರ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

    ಇನಾಮದಾರ​ ಅವರು ನ್ಯುಮೋನಿಯಾ ಹಾಗೂ ಶ್ವಾಸಕೋಶ ಸೋಂಕು ಹಿನ್ನೆಲೆಯಲ್ಲಿ ಹಲವು ದಿನಗಳಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ನಿಧನರಾಗಿದ್ದಾರೆ. ಇದನ್ನೂ ಓದಿ: ಸಾಮಾಜಿಕ ಕ್ರಾಂತಿಯ ಸಂತ; ಇಂದು ರಾಮಾನುಜ ಜಯಂತಿ

    ಬೆಳಗಾವಿ ಜಿಲ್ಲೆಯ ಕಿತ್ತೂರು ಮತಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕರಾಗಿದ್ದರು. 9 ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿ 5 ಸಲ‌ ಶಾಸಕರಾಗಿ ಆಯ್ಕೆಯಾಗಿದ್ದರು. ಹಲವು ಮಹತ್ವ ಖಾತೆಗಳನ್ನು ಇನಾಮದಾರ ನಿಭಾಯಿಸಿದ್ದಾರೆ. ಕಿತ್ತೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕಿತ್ತೂರು ಭಾಗದ ಧಣಿ ಎಂದೇ ಇನಾಮದಾರ ಖ್ಯಾತರಾಗಿದ್ದರು. (ದಿಗ್ವಿಜಯ ನ್ಯೂಸ್​)

    ಕ್ರೈಂ ಹಾದಿ ಹಿಡಿದ ಬಾಡಿ ಬಿಲ್ಡರ್​! ನೋಡಲು ಹೀರೋ ಥರ ಇದ್ದಾತ ಆದದ್ದು ಕಳ್ಳ

    ಮಾಜಿ ಪ್ರಧಾನಿ ದೇವೇಗೌಡರ ಕೆಂಗಣ್ಣಿಗೆ ಗುರಿಯಾದ್ರಾ ಮಾಜಿ ಡಿಸಿಎಂ ಪರಮೇಶ್ವರ್?

    ಕ್ಷೇತ್ರದ ಅಭಿವೃದ್ಧಿಯೇ ನನ್ನ ಗುರಿ: ಸಚಿವ ಕೆ. ಗೋಪಾಲಯ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts