ಬೆಂಗಳೂರಿನಲ್ಲಿ ಮಧ್ಯಪ್ರದೇಶ ರಾಜಕೀಯದ ಹೈಡ್ರಾಮಾ..

ಬೆಂಗಳೂರು: ಮಧ್ಯಪ್ರದೇಶದ 21 ಕಾಂಗ್ರೆಸ್ ಶಾಸಕರು ಬೆಂಗಳೂರಿನ ರಮಡಾ ಹೋಟೆಲ್​ನಲ್ಲಿ ಉಳಿದುಕೊಂಡಿದ್ದು, ಅವರನ್ನು ಒತ್ತೆಯಲ್ಲಿ ಇರಿಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಬುಧವಾರ ಬೆಳಗ್ಗೆಯೇ ಆ ಹೋಟೆಲ್​ ಎದುರು ಧರಣಿ ಆರಂಭಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, ಮಧ್ಯಪ್ರದೇಶದ ಕಾಂಗ್ರೆಸ್​ ನಾಯಕ ದಿಗ್ವಿಜಯ ಸಿಂಗ್​ ಮತ್ತು ಇತರರು ಹೋಟೆಲ್ ಎದುರು ಇದ್ದು, ಒಳಗಿರುವ ಶಾಸಕರ ಭೇಟಿಗೆ ಪ್ರಯತ್ನಿಸುತ್ತಿದ್ದಾರೆ. ಇದಕ್ಕೂ ಮುನ್ನ, ಬುಧವಾರ ಬೆಳ್ಳಂಬೆಳಗ್ಗೆಯೇ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ ದಿಗ್ವಿಜಯ ಸಿಂಗ್​ ಅವರನ್ನು ಡಿ.ಕೆ.ಶಿವಕುಮಾರ್ ಮತ್ತು ಇತರೆ ನಾಯಕರು ಬರಮಾಡಿಕೊಂಡರು. … Continue reading ಬೆಂಗಳೂರಿನಲ್ಲಿ ಮಧ್ಯಪ್ರದೇಶ ರಾಜಕೀಯದ ಹೈಡ್ರಾಮಾ..