ಹರಿಯಾಣ: ಸಂಸತ್ನಲ್ಲಿ ಒಪ್ಪಿಗೆ ಪಡೆದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರಗಳು ಇಲ್ಲ ಎನ್ನುವಂತಿಲ್ಲ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡ ಅಭಿಪ್ರಾಯಪಟ್ಟಿದ್ದಾರೆ.
ಸಂಸತ್ನಲ್ಲಿ ಪಾಸ್ ಆಗಿರುವ ಮಸೂದೆಯನ್ನು ರಾಷ್ಟ್ರಪತಿ ಅವರೂ ಅನುಮೋದನೆ ನೀಡಿದ್ದಾರೆ. ಇಂತಹ ಕಾಯ್ದೆಯನ್ನು ಸಂವಿಧಾನಿಕ ದೃಷ್ಟಿ ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.
ಇಂತಹ ಕಾಯ್ದೆಯನ್ನು ಜಾರಿಗೊಳಿಸುವ ಬಗ್ಗೆ ರಾಜ್ಯಗಳು ಇಲ್ಲ ಎನ್ನುವಂತಿಲ್ಲ, ಆದರೆ ಈ ಕಾಯ್ದೆ ಬಗ್ಗೆ ಕಾನೂನಾತ್ಮಕವಾಗಿ ಪರೀಕ್ಷಿಸುವ ಅಗತ್ಯವಿದೆ ಎಂದಿದ್ದಾರೆ.
ನಿನ್ನೆ (ಭಾನುವಾರ- ಜ.19)ರಂದು ಕೇರಳ ಸಾಹಿತ್ಯ ಉತ್ಸವದಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಕಪಿಲ್ ಸಿಬಲ್ ಕಪಿಲ್ ಸಿಬಲ್ ಅವರು ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಸಾಂವಿಧಾನಿಕವಾಗಿ ರಾಜ್ಯಗಳು ಸಂಸತ್ನಿಂದ ಹೊರಬಂದ ಕಾಯ್ದೆಗಳನ್ನು ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಹೇಳುವಂತಿಲ್ಲ ಎಂದಿದ್ದರು. ಪಾರ್ಲಿಮೆಂಟ್ನಲ್ಲಿ ಒಪ್ಪಿಗೆ ಪಡೆದ ಕಾಯ್ದೆಗಳನ್ನು ರಾಜ್ಯಗಳು ಜಾರಿ ತರಲಾಗುವುದಿಲ್ಲ ಎಂದು ಹೇಳುವಂತಿಲ್ಲ ಎಂದು ಅಭಿಪ್ರಾಯಪಟ್ಟು ಈ ಬಗ್ಗೆ ಟ್ವೀಟ್ ಕೂಡ ಮಾಡಿದ್ದರು. (ಏಜೆನ್ಸೀಸ್)