ನವದೆಹಲಿ: ಕರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಪಶ್ಚಿಮ ಬಂಗಾಳ ಚುನಾವಣೆಯ ಪ್ರಚಾರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೂರ ಉಳಿದಿದ್ದಾರೆ.
ಈ ಕುರಿತು ಟ್ವಿಟ್ಟರ್ನಲ್ಲಿ ವಿಷಯ ತಿಳಿಸಿರುವ ಅವರು, ಕರೊನಾ ಕಾರಣದಿಂದ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಪರ ಸಮಾವೇಶಗಳಿಂದ ದೂರು ಉಳಿಯಲಿದ್ದೇನೆ ಎಂದು ತಿಳಿಸಿದ್ದಾರೆ. ಈಗಾಗಲೇ ಪಶ್ಚಿಮ ಬಂಗಾಳದಲ್ಲಿ ಐದು ಹಂತದ ಚುನಾವಣೆ ಮುಗಿದಿದ್ದು, ಇನ್ನೂ ಮೂರು ಹಂತದ ಚುನಾವಣೆ ಬಾಕಿ ಇದೆ.
ಅಲ್ಲದೇ ರಾಹುಲ್ ಗಾಂಧಿ ಅವರು, ರಾಜಕೀಯ ಪಕ್ಷಗಳ ನಾಯಕರಿಗೆ ಕರೊನಾದ ಈ ಸಂಕಷ್ಟದ ಸಮಯದಲ್ಲಿ ಬೃಹತ್ ಸಾರ್ವಜನಿಕ ಸಮಾವೇಶಗಳನ್ನು ಆಯೋಜಿಸದಿರುವಂತೆ ಮನವಿ ಮಾಡಿದ್ದಾರೆ.
ಇನ್ನೊಂದೆಡೆ ಪಶ್ಚಿಮ ಬಂಗಾಳದಲ್ಲಿ ಅಮಿತ್ ಶಾ ಹಾಗೂ ನರೇಂದ್ರ ಮೋದಿ ಅವರು ಬೃಹತ್ ಸಾರ್ವಜನಿಕ ಸಮಾವೇಶಗಳನ್ನು ಆಯೋಜಿಸಿ ಅದರಲ್ಲಿ ಭಾಗಿಯಾಗುತ್ತಿರುವುದಕ್ಕೆ ವ್ಯಾಪಕವಾದ ವಿರೋಧಗಳು ಕೇಳಿ ಬರುತ್ತಿವೆ.
ಜನನಾಂಗಕ್ಕೆ ಮೊಳೆ, ಕಲ್ಲು ತುರುಕಿ ವಿಕೃತಿ: 11 ದಿನ 23 ಸೈನಿಕರಿಂದ ಅನುಭವಿಸಿದ ನರಕಯಾತನೆ ಬಿಚ್ಚಿಟ್ಟ ಮಹಿಳೆ!