More

    VIDEO| ಕಾಂಗ್ರೆಸ್​ ನಾಯಕನನ್ನು ಗುಂಡಿಕ್ಕಿ ಹತ್ಯೆ; ಹೊಣೆ ಹೊತ್ತ ಖಲಿಸ್ತಾನಿ ಭಯೋತ್ಪಾದಕ

    ಅಮೃತಸರ: ಆಘಾತಕಾರಿ ಘಟನಟಯೊಂದರಲ್ಲಿ ಸ್ಥಳೀಯ ಕಾಂಗ್ರೆಸ್​ ನಾಯಕರೊಬ್ಬರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬಿನ ಮೊಗಾ ಜಿಲ್ಲೆಯಲ್ಲಿ ನಡೆದಿದೆ.

    ಬಲ್ಜಿಂದರ್ ಸಿಂಗ್​ ಬಲ್ಲಿ ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಇವರ ಹತ್ಯೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಖಲಿಸ್ತಾನಿ ಭಯೋತ್ಪಾದಕ ಹರ್ಷ್​ ದಲ್ಲಾ ಇವರ ಹತ್ಯೆಯ ಹೊಣೆಯನ್ನು ಹೊತ್ತಿದ್ದಾನೆ.

    ವಿಡಿಯೋ ವೈರಲ್​

    ವೈರಲ್​ ಆಗಿರುವ ವಿಡಿಯೋದಲ್ಲಿ ತಮ್ಮ ಮನೆಯಿಂದ ಹೊರಬರುವ ಬಲ್ಜಿಂದರ್​ ಅವರ ಮೇಲೆ ಗುಂಡು ಹಾರಿಸುವ ದುಷ್ಕರ್ಮಿಗಳು ಸ್ಥಳದಿಂದ ತಕ್ಷಣವೆ ಪಲಾಯನ ಮಾಡುತ್ತಾರೆ. ಗಂಭೀರವಾಗಿ ಗಾಯಗೊಂಡಿದ್ದ ಬಲ್ಜಿಂದರ್​ನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

    ಇದನ್ನೂ ಓದಿ: ಕಾವೇರಿ ಜಲವಿವಾದ; ರೈತರ ಹಿತಾಸಕ್ತಿಗೆ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್

    ಬಲ್ಜಿಂದರ್​ ಅವರ ಹತ್ಯೆಯ ಹೊಣೆಯನ್ನು ಹೊತ್ತಿರುವ ಖಲಿಸ್ತಾನಿ ಭಯೋತ್ಪಾದಕ ಹರ್ಷ್​ ದಲ್ಲಾ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾನೆ. ಬಲ್ಜಿಂದರ್​ ಸಿಂಗ್​ ಬಲ್ಲಿ ನನ್ನ ಭವಿಷ್ಯವನ್ನು ಹಾಳು ಮಾಡಿ ನಾನು ಗ್ಯಾಂಗ್​ಸ್ಟಾರ್​ ಆಗಿ ಬೆಳೆಯಲು ಪ್ರಮುಖ ಕಾರಣ ಆಗಿದ್ದಾನೆ. ನನ್ನ ತಾಯಿಯನ್ನು ಪೊಲೀಸರು ವಶಕ್ಕೆ ಪಡೆಯುವುದರ ಹಿಂದೆ ಈತನ ಕೈವಾಡವಿದೆ. ಈತನ ವಿರುದ್ಧ ಸೇಡು ತೀರಿಸಿಕೊಳ್ಳಲು ನಗೆ ಪ್ರೇರೆಪಿಸಿತು ಎಂದು ಬರೆದುಕೊಂಡಿದ್ದಾನೆ.

    ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ

    ಇತ್ತ ಬಲ್ಜಿಂದರ್​ ಸಿಂಗ್ ಹತ್ಯೆಯನ್ನು ಖಂಡಿಸಿರುವ ಪಂಜಾಬ್​ ಕಾಂಗ್ರೆಸ್​ ಘಟಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಇದು ಸ್ಪಷ್ಟ ನಿದರ್ಶನವಾಗಿದೆ. 2022ರಲ್ಲಿ ಸಿಧು ಮೂಸೇವಾಲಾ ಅವರನ್ನು ಇದೇ ರೀತಿ ಹತ್ಯೆ ಮಾಡಲಾಗಿತ್ತು. ರಾಜ್ಯದಲ್ಲಿ ಯಾರಿಗೂ ರಕ್ಷಣೆ ಇಲ್ಲದಂತಾಗಿದೆ ಎಂದು ಕಾಂಗ್ರೆಸ್​ ಆರೋಪಿಸಿದೆ.

    ರಾಷ್ಟ್ರೀಯ ತನಿಕಾ ದಳಕ್ಕೆ ಬೇಕಾಗಿರುವ ಹರ್ಷ್​ ದಲ್ಲಾ ಕೆನಡಾದಲ್ಲಿ ವಾಸವಿದ್ದಾನೆ. ಕಳೆದ ಮೂರ್ನಾಲ್ಕು ವರ್ಷಗಳ ಅವಧಿಯಲ್ಲಿ ಪಂಜಾಬ್​ನಲ್ಲಿ ನಡೆದ ಹಲವು ಹತ್ಯೆಯ ಹೊಣೆಯನ್ನು ಈತ ಹೊತ್ತಿದ್ದಾನೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts