ಬೆಂಗಳೂರು: ರಾಜ್ಯದಲ್ಲಿನ ಕಾಂಗ್ರೆಸ್ ನಾಯಕರನ್ನು ಬಿಜೆಪಿ ಒಂದೊಂದಾಗಿ ಕಾಣೆಯಾಗಿಸುತ್ತಿದೆ. ಇತ್ತೀಚೆಗಷ್ಟೇ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಕಾಣೆಯಾಗಿಸಿದ್ದ ಬಿಜೆಪಿ, ಇದೀಗ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನೂ ನಾಪತ್ತೆ ಆಗಿಸಿದೆ.
‘ಸದಾ ಸಾಮಾಜಿಕ ಜಾಲತಾಣಗಳಲ್ಲೇ ಕಾಲಹರಣ ಮಾಡುವ ಸತ್ಯ ಸಂಶೋಧನಾ ಮಂತ್ರಿಗಳಾದ ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆ. ಕಾಂಗ್ರೆಸ್ನ ದುರಾಡಳಿತಕ್ಕೆ ಬೇಸತ್ತ ಗ್ರಾಮ ವಾಸಿಗರು ಗ್ರಾಮೀಣಾಭಿವೃದ್ಧಿ ಸಚಿವರ ಶೋಧನೆಯಲ್ಲಿ ತೊಡಗಿದ್ದು, ಇವರು ಸೇರಿಕೊಂಡಿರುವ ಜಾಗದ ಖಚಿತ ಮಾಹಿತಿಗಾಗಿ ಕಾದು ಕೂತಿದ್ದಾರೆ. ದಯವಿಟ್ಟು ಹುಡುಕಿ ಕೊಡಿ!’ ಎಂದು ರಾಜ್ಯ ಬಿಜೆಪಿಯ ಅಧಿಕೃತ ಎಕ್ಸ್ ಹ್ಯಾಂಡಲ್ನಲ್ಲಿ ಕಾಣೆಯಾದವರ ಪ್ರಕಟಣೆ ಮಾದರಿಯಲ್ಲಿನ ಪೋಸ್ಟ್ ಹಂಚಿಕೊಳ್ಳಲಾಗಿದೆ.
ಇದನ್ನೂ ಓದಿ: ಅರಿಶಿನ-ಕುಂಕುಮ ಬಳಸದೆ ಆಯುಧಪೂಜೆ ಮಾಡಿ: ಸರ್ಕಾರದಿಂದ ಹೊಸ ಆದೇಶ
ಅಂದಹಾಗೆ ಕಳೆದ ವರ್ಷವೂ ಪ್ರಿಯಾಂಕ್ ಖರ್ಗೆ ವಿಚಾರವಾಗಿ ಇಂಥದ್ದೇ ಪ್ರಕಟಣೆ ಹೊರಡಿಸಲಾಗಿತ್ತು. ‘ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆ’ ಎಂದು ಬಿಜೆಪಿ ಯುವ ಮುಖಂಡ ಅರವಿಂದ್ ಚೌಹಾಣ್ ಎಂಬವರು ಕಲಬುರಗಿ ಜಿಲ್ಲೆಯ ಚಿತ್ತಾಪುರ ನಗರದ ಹಲವೆಡೆ ಪೋಸ್ಟರ್ ಅಂಟಿಸಿದ್ದರು.
ಇದನ್ನೂ ಓದಿ: ಗಾಂಧಿನಗರ ಶಾಸಕ ದಿನೇಶ್ ಗುಂಡೂರಾವ್ ಕಾಣೆಯಾಗಿದ್ದಾರೆ: ಎಎಪಿ
ಕೆಲವು ದಿನಗಳ ಹಿಂದೆ, ‘ಡಿ.ಕೆ.ಶಿವಕುಮಾರ್ ಕಾಣೆಯಾಗಿದ್ದಾರೆ, ದಯವಿಟ್ಟು ಹುಡುಕಿಕೊಂಡಿ’ ಎಂದು ಕಾಣೆಯಾದವರ ಜಾಹೀರಾತು ಮಾದರಿಯಲ್ಲಿ ಪೋಸ್ಟರ್ ರಚಿಸಿ ರಾಜ್ಯ ಬಿಜೆಪಿಯ ಅಧಿಕೃತ ಹ್ಯಾಂಡಲ್ನಲ್ಲಿ ಪೋಸ್ಟ್ ಮಾಡಲಾಗಿತ್ತು.
ಇದನ್ನೂ ಓದಿ: ‘ಡಿ.ಕೆ.ಶಿವಕುಮಾರ್ ಕಾಣೆಯಾಗಿದ್ದಾರೆ, ದಯವಿಟ್ಟು ಹುಡುಕಿಕೊಡಿ’: ಪೋಸ್ಟರ್ ಹರಿಬಿಟ್ಟ ಬಿಜೆಪಿ
ಬಿಜೆಪಿಯ ಈ ಕಾಣೆಯಾಗಿದ್ದಾರೆ ಪ್ರಕಟಣೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದು, ಚುನಾವಣೆಯಲ್ಲಿ ಹೀನಾಯವಾಗಿ ಸೋತು, ಜನರಿಂದ ತಿರಸ್ಕಾರಕ್ಕೆ ಒಳಗಾಗಿ, ದೆಹಲಿಯಲ್ಲಿ ಮರ್ಯಾದೆ ಸಿಗದೆ, ರಾಜ್ಯದಲ್ಲಿ ಅಧಿಕಾರದ ಕುರ್ಚಿ ಸಿಗದೆ ಬಿಜೆಪಿಗರು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.
ಇದನ್ನೂ ಓದಿ: ‘ಪ್ರಿಯಾಂಕ್ ಖರ್ಗೆ ಕಾಣೆಯಾಗಿದ್ದಾರೆ…’ ಚಿತ್ತಾಪುರ ನಗರದಲ್ಲಿ ಪೋಸ್ಟರ್
ಅಲ್ಲದೆ, ರಾಜ್ಯದಲ್ಲಿ ಕಾಣೆಯಾಗಿರೋದು ಕಾಂಗ್ರೆಸ್ ನಾಯಕರಲ್ಲ.. ಕಾಣೆಯಾಗಿರುವುದು ಬಿಜೆಪಿಗರ ಬೆನ್ನು ಮೂಳೆ, ಕಾಣೆಯಾಗಿರುವುದು ಬಿಜೆಪಿಯ ನಾಯಕತ್ವ, ಕಾಣೆಯಾಗಿರುವುದು ಬಿಜೆಪಿಗರ ಸ್ವಾಭಿಮಾನ, ಕಾಣೆಯಾಗಿರುವುದು ಬಿಜೆಪಿಯ ಅಸ್ತಿತ್ವ ಎಂದಿರುವ ಪ್ರಿಯಾಂಕ್, ಬಿಜೆಪಿಯಲ್ಲಿ ನಾಯಕತ್ವವೇ ಕಾಣೆಯಾಗಿದೆ ಎಂದಿದ್ದಾರೆ.
ಚುನಾವಣೆಯಲ್ಲಿ ಹೀನಾಯವಾಗಿ ಸೋತು, ಜನರಿಂದ ತಿರಸ್ಕಾರಕ್ಕೆ ಒಳಗಾಗಿ, ದೆಹಲಿಯಲ್ಲಿ ಮರ್ಯಾದೆ ಸಿಗದೆ, ರಾಜ್ಯದಲ್ಲಿ ಅಧಿಕಾರದ ಕುರ್ಚಿ ಸಿಗದೆ ಬಿಜೆಪಿಗರು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದಾರೆ!
ರಾಜ್ಯದಲ್ಲಿ ಕಾಣೆಯಾಗಿರೋದು ಕಾಂಗ್ರೆಸ್ ನಾಯಕರಲ್ಲ.
●ಕಾಣೆಯಾಗಿರುವುದು ಬಿಜೆಪಿಗರ ಬೆನ್ನು ಮೂಳೆ!
– ರಾಜ್ಯಕ್ಕೆ ಕೇಂದ್ರದಿಂದ 540 ಕೋಟಿ ನರೇಗಾ… https://t.co/eLTlgutH7W
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) October 18, 2023
ಪೆಟ್ರೋಲ್ ಬಂಕ್ಗಳಲ್ಲಿನ ಮೋಸ ತಪ್ಪಿಸಲು ಸರ್ಕಾರಕ್ಕೆ ಹೊಸ ಬೇಡಿಕೆ: ವಿಡಿಯೋ ವೈರಲ್!
ಐಸ್ ಕ್ರೀಮ್ ಟ್ರಕ್ಗಳಲ್ಲಿ ಶವ!: ಹೊರಗೆ ಮಕ್ಕಳು ಐಸ್ ಕ್ರೀಮ್ ಮೆಲ್ಲುವ ಚಿತ್ರ, ಒಳಗೆ ಮೃತದೇಹಗಳು!