ಬೀದರ್: ಕೊವಿಡ್-19ರ ಬಿಕ್ಕಟ್ಟಿನ ನಡುವೆ ರಾಜಕೀಯ ಪಕ್ಷಗಳಲ್ಲೂ ಅಸಮಾಧಾನ, ಭಿನ್ನಮತ ಶುರುವಾಗಿದೆ. ಕಾಂಗ್ರೆಸ್ನಲ್ಲೂ ಅತೃಪ್ತಿಯ ಹೊಗೆಯಾಡುತ್ತಿದೆ ಎಂಬುದು ಇಂದು ಬೀದರ್ನಲ್ಲಿ ಬಹಿರಂಗವಾಗಿದೆ.
ಕೆಪಿಸಿಸಿ ಅಧ್ಯಕ್ಷರ ಪದಗ್ರಹಣಕ್ಕೂ ಮೊದಲೇ ಅವರ ಬಗ್ಗೆ ಶಾಸಕ ಬಿ.ನಾರಾಯಣ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಡಿ.ಕೆ.ಶಿವಕುಮಾರ್ ಕೈಯಿಗೆ ಸಿಗೋದೇ ಇಲ್ಲ ಎಂದು ಅವರು ದೂರಿದ್ದಾರೆ.
ಡಿ.ಕೆ.ಶಿವಕುಮಾರ್ ಅವರ ಎದುರು ನಾವು ನಿಂತರೂ ಅವರು ನಮ್ಮನ್ನು ನೋಡುವುದಿಲ್ಲ. ನಮಸ್ಕಾರ ಮಾಡಿದರೂ ಮಾಡುವುದಿಲ್ಲ ಎಂದು ಬಸವಕಲ್ಯಾಣ ಶಾಸಕ ಬಿ.ನಾರಾಯಣ್ ಅವರು ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ತಮ್ಮ ಬೇಸರ ಹೊರಹಾಕಿದ್ದಾರೆ.
ಇದನ್ನೂ ಓದಿ: PHOTOS: ಪ್ರಿಯಕರನ ಮೋಸಕ್ಕೆ ಬಲಿಯಾದ ನಟಿ ಚಂದನಾರ ಸಂತೋಷದ ಕ್ಷಣಗಳು…
ಈ ಸಭೆಯಲ್ಲಿ ಮಾಜಿ ಸಚಿವರಾದ ರಾಜಶೇಖರ್ ಪಾಟೀಲ್, ರಹೀಂ ಖಾನ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಎದುರಲ್ಲೇ ಶಾಸಕ ಬಿ.ನಾರಾಯಣ್ ಹೀಗೆ ಹೇಳಿದ್ದಾರೆ. ಬಿ.ನಾರಾಯಣ್ ಅವರು ಮಾಜಿ ಸಿಎಂ ಸಿದ್ದರಾಮಯ್ಯನವರ ಆಪ್ತವಲಯದಲ್ಲಿ ಗುರುತಿಸಿಕೊಂಡವರು. (ದಿಗ್ವಿಜಯ ನ್ಯೂಸ್)
ಇದನ್ನೂ ಓದಿ: ಕರೊನಾ ಸೋಂಕಿನ ಭೀತಿ: ಮುಖ್ಯಮಂತ್ರಿ ಹಾಗೂ ಸಚಿವರು ಕ್ವಾರಂಟೈನ್ಗೆ